ಶಬರಿಮಲೆ 
ದೇಶ

ಶಬರಿಮಲೆಗೆ ಹೋಗಲು ಯತ್ನಿಸಿದ್ದ ಇಬ್ಬರು ಮಹಿಳೆಯರನ್ನು ವಾಪಸ್ ಕಳುಹಿಸಿದ ಪೊಲೀಸರು

ಅಯ್ಯಪ್ಪ ಸ್ವಾಮಿಯ ದೇಗುಲಕ್ಕೆ ಪ್ರವೇಶಿಸಲು ಬೆಟ್ಟ ಹತ್ತಲು ಯತ್ನಿಸಿದ್ದ 50 ವರ್ಷಕ್ಕಿಂತ ಕೆಳಗಿನ ಇಬ್ಬರು ...

ಶಬರಿಮಲೆ: ಅಯ್ಯಪ್ಪ ಸ್ವಾಮಿಯ ದೇಗುಲ ಪ್ರವೇಶಿಸಲು ಬೆಟ್ಟ ಹತ್ತಲು ಯತ್ನಿಸಿದ್ದ 50 ವರ್ಷಕ್ಕಿಂತ ಕೆಳಗಿನ ಇಬ್ಬರು ಮಹಿಳೆಯರನ್ನು ಶನಿವಾರ ನಸುಕಿನ ಜಾವ ಪೊಲೀಸರು ವಾಪಸ್ ಕಳುಹಿಸಿದ ಘಟನೆ ನಡೆದಿದೆ.

ಬಲಪಂಥೀಯ ಸಂಘಟನೆಗಳಿಂದ ಹೊರಗೆ ಪ್ರತಿಭಟನೆ ನಡೆಯುತ್ತಿರುವುದರಿಂದ ರಕ್ಷಣೆ ನೀಡುವುದು ಕಷ್ಟ ಎಂದು ಪೊಲೀಸರು ಹೇಳಿದ್ದರಿಂದ ಮಹಿಳೆಯರು ಹಿಂತಿರುಗಿ ಬರಬೇಕಾಯಿತು.

ಕಳೆದ 16ರಂದು ಬೆಟ್ಟ ಹತ್ತಿ ಅಯ್ಯಪ್ಪನ ದರುಶನ ಮಾಡಲು ರೇಶ್ಮ ನಿಶಾಂತ್ ಮತ್ತು ಶಲೀನಾ ಸಾಜೇಶ್ ಎಂಬ ಇಬ್ಬರು ಮಹಿಳೆಯರು ಯತ್ನಿಸಿದ್ದರು. ಆದರೆ ಪ್ರತಿಭಟನೆಯಿಂದಾಗಿ ವಾಹಸ್ ಬರಬೇಕಾಯಿತು. ಸುಮಾರು 30 ವರ್ಷ ಆಸುಪಾಸಿನಲ್ಲಿರುವ ಇವರಿಬ್ಬರೂ 41 ದಿನಗಳ ವೃತವನ್ನು ಕೈಗೊಂಡು ಬಂದಿರುವುದಾಗಿ ಹೇಳಿದ್ದರು.ಇಂದು ಬೆಳಗ್ಗೆ ಮತ್ತೆ ಬೆಟ್ಟ ಹತ್ತಬೇಕೆಂದು ಬೆಳಗ್ಗೆ 5 ಗಂಟೆ ಸುಮಾರಿಗೆ ನಿಲಕ್ಕಲ್ ಮೂಲ ಶಿಬಿರದ ಬಳಿ ಬಂದಿದ್ದರು.

ಇಂದು ಬೆಳಗ್ಗೆಯಿಂದಲೇ ಅಯ್ಯಪ್ಪ ಬೆಟ್ಟಕ್ಕೆ ಹತ್ತುವವರ ಸಂಖ್ಯೆ ಅಧಿಕವಾಗಿತ್ತು. ಹೀಗಾಗಿ ಪೊಲೀಸರು ಅವರನ್ನು ನಿಯಂತ್ರಣ ಕೊಠಡಿಗೆ ಕರೆದುಕೊಂಡು ಹೋಗಿ ಇರುವ ಸಮಸ್ಯೆ ಬಗ್ಗೆ ಮನದಟ್ಟು ಮಾಡಿದರು.

ಪುರುಗಮನ ನವತೊಣ ಕೂಟಯಿಮ್ಮ ಎಂಬ ಗುಂಪಿನ ಆರು ಮಂದಿ ಈ ಇಬ್ಬರು ಮಹಿಳೆಯರೊಂದಿಗೆ ಬಂದಿದ್ದು ಅವರು ಕೂಡ ದೇವರ ದರ್ಶನ ಪಡೆಯದೆ ಹಿಂತಿರುಗಬೇಕಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT