ಜೀತೇಂದ್ರ ಸಿಂಗ್ 
ದೇಶ

ಜಮ್ಮು-ಕಾಶ್ಮೀರದಲ್ಲಿ ಲೋಕಸಭೆ, ಆಸೆಂಬ್ಲಿ ಚುನಾವಣೆಗೆ ಸಿದ್ಧ- ಬಿಜೆಪಿ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಲೋಕಸಭೆ ಹಾಗೂ ಆಸೆಂಬ್ಲಿ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಿದ್ಧವಿರುವುದಾಗಿ ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಲೋಕಸಭೆ ಹಾಗೂ ಆಸೆಂಬ್ಲಿ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಿದ್ಧವಿರುವುದಾಗಿ ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ.

ರಾಂಬನ್ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೀತೇಂದ್ರ ಸಿಂಗ್, ಆಸೆಂಬ್ಲಿ ಹಾಗೂ ಲೋಕಸಭೆ ಚುನಾವಣೆ ಒಟ್ಟಿಗೆ ನಡೆದರೂ ಬಿಜೆಪಿ ಸಿದ್ದವಿದೆ ಎಂದರು.

ಚುನಾವಣಾ ಆಯೋಗ ಪರಿಶೀಲನೆ ನಂತರ  ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಇಂದೇ ಚುನಾವಣೆ ನಡೆದರೂ ಬಿಜೆಪಿ ಸಿದ್ದವಿರುವುದಾಗಿ ಜೀತೇಂದ್ರ ಸಿಂಗ್ ಹೇಳಿದರು.

ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ. ಹಿಂದೆ ಆಡಳಿತ ನಡೆಸಿರುವ ಸರ್ಕಾರಗಳು ಕಣಿವೆ ಜಿಲ್ಲೆಯನ್ನು ನಿರ್ಲಕ್ಷಿಸಿವೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯದ ರಾಜ್ಯ ಸಚಿವರು ಆಗಿರುವ ಜೀತೇಂದ್ರ ಸಿಂಗ್ ಆರೋಪಿಸಿದ್ದು, ಜಮ್ಮು- ಕಾಶ್ಮೀರದ ಅಭಿವೃದ್ಧಿ ಕೇಂದ್ರಸರ್ಕಾರದ ಆದ್ಯತೆಯಾಗಿದೆ ಎಂದರು.

ಚೆನಾಬ್ ನದಿ ಮೇಲೆ ಸೇತುವೆ ಕಾಮಗಾರಿ ಅನುಮೋದನೆಗೊಂಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುವುದು ಎಂದು ಜೀತೇಂದ್ರ ಸಿಂಗ್ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT