ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

ಕೇರಳ ಪ್ರವಾಹ ಸಂತ್ರಸ್ತರಿಗೆ ಕಳುಹಿಸಿದ್ದ ಚೆಕ್, ಡಿಡಿಗಳಲ್ಲಿ ಅರ್ಧದಷ್ಟು ತಿರಸ್ಕೃತ!

ಕಳೆದ ವರ್ಷ ಆಗಸ್ಟ್ ನಲ್ಲಿ ಉಂಟಾದ ಕೇರಳ ರಾಜ್ಯದ ಭೀಕರ ನೆರೆ ಪ್ರವಾಹ ಸಂತ್ರಸ್ತರಿಗೆ ಪರಿಹಾರವಾಗಿ ...

ಕಾಸರಗೋಡು: ಕಳೆದ ವರ್ಷ ಆಗಸ್ಟ್ ನಲ್ಲಿ ಉಂಟಾದ ಕೇರಳ ರಾಜ್ಯದ ಭೀಕರ ನೆರೆ ಪ್ರವಾಹ ಸಂತ್ರಸ್ತರಿಗೆ ಪರಿಹಾರವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಲಾಗಿದ್ದ ಚೆಕ್ ಮತ್ತು ಡಿಡಿಗಳನ್ನು ಬ್ಯಾಂಕುಗಳು ತಿರಸ್ಕರಿಸಿವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 30ರವರೆಗೆ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ 7.46 ಕೋಟಿ ರೂಪಾಯಿ ಚೆಕ್ ಮತ್ತು ಡಿಡಿಗಳು ಬಂದಿವೆ ಎಂದು ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಕಾಸರಗೋಡು ಕ್ಷೇತ್ರದ ಶಾಸಕ ಎನ್ ಎ ನೆಲ್ಲಿಕುನ್ನು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಅವುಗಳಲ್ಲಿ 3.26 ಕೋಟಿ ರೂಪಾಯಿಗಳ 395 ಚೆಕ್ ಮತ್ತು ಡಿಡಿಗಳನ್ನು ಬ್ಯಾಂಕುಗಳು ತಿರಸ್ಕರಿಸಿವೆ ಎಂದರು.

ನೆರೆ ಪ್ರವಾಹ ಸಂದರ್ಭದಲ್ಲಿ ತಮಗೆ ಪ್ರಚಾರ ಸಿಗಬೇಕೆಂಬ ಉದ್ದೇಶದಿಂದ ಹಲವು ವ್ಯಕ್ತಿಗಳು ಮತ್ತು ಸಂಘಟನೆಗಳು ಚೆಕ್ ಗಳನ್ನು ನೀಡಿದ್ದಾರೆ ಎಂದು ನೆಲ್ಲಿಕ್ಕುನ್ನು ಹೇಳಿದರು.

ಇನ್ನು ಕಳೆದ ನವೆಂಬರ್ ವರೆಗೆ ನಗದು ರೂಪದಲ್ಲಿ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ 2,796.67 ಕೋಟಿ ರೂಪಾಯಿ ಬಂದಿದೆ. ಅವುಗಳಲ್ಲಿ ಆನ್ ಲೈನ್ ವಹಿವಾಟು ಮೂಲಕ 260.45 ಕೋಟಿ ರೂಪಾಯಿ, 2,537.22 ಕೋಟಿ ರೂಪಾಯಿ ನಗದು, ಚೆಕ್ ಮತ್ತು ಡಿಡಿ ರೂಪದಲ್ಲಿ ಬಂದಿವೆ. ಇವುಗಳಲ್ಲಿ ನೆರೆ ಪ್ರವಾಹ ಸಂದರ್ಭದಲ್ಲಿ 457.23 ಕೋಟಿ ರೂಪಾಯಿಗಳನ್ನು ಆಕಸ್ಮಿಕ ನೆರವು ರೂಪದಲ್ಲಿ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT