ಅಮಿತ್ ಶಾ 
ದೇಶ

ಪ್ರತಿಪಕ್ಷಗಳು ಕೋಲ್ಕತಾ ರ್ಯಾಲಿಯಲ್ಲಿ 'ಭಾರತ್ ಮಾತಾ ಕಿ ಜೈ' ಹೇಳಿಲ್ಲ: ಅಮಿತ್ ಶಾ

ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೋಲ್ಕತಾದಲ್ಲಿ ನಡೆದ ಮಹಾಘಟಬಂಧನ್...

ಮಾಲ್ಡಾ: ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೋಲ್ಕತಾದಲ್ಲಿ ನಡೆದ ಮಹಾಘಟಬಂಧನ್ ರ್ಯಾಲಿಯಲ್ಲಿ ಒಂದೇ ಒಂದು ಸಲ 'ಭಾರತ್ ಮಾತಾ ಕಿ ಜೈ' ಹೇಳಿಲ್ಲ ಎಂದು ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಂದು ಮಾಲ್ಡಾದಲ್ಲಿ ಬಿಜೆಪಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪೌರತ್ವ ಮಸೂದೆ ಅಂಗೀಕರಿಸುವುದರೊಂದಿಗೆ ಬೆಂಗಾಳಿ ನಿರಾಶ್ರಿತರಿಗೆ ಪೌರತ್ವ ನೀಡಲಾಗುವುದು ಎಂದು ಹೇಳಿದರು.
ಪೌರತ್ವ ಮಸೂದೆ ಅಡಿ ಎಲ್ಲಾ ಬೆಂಗಾಲಿ ನಿರಾಶ್ರಿತರಿಗೆ ಪೌರತ್ವ ನೀಡುತ್ತೇವೆ ಎಂಬ ಭರವಸೆಯನ್ನು ನಾನು ನೀಡುತ್ತಿದ್ದೇನೆ. ನಿರಾಶ್ರಿತರಿಗಾಗಿ ಟಿಎಂಸಿ ಸರ್ಕಾರ ಏನನ್ನೂ ಮಾಡಿಲ್ಲ. ಆದರೆ ನಾವು ಅವರಿಗೆ ಪೌರತ್ವ ನೀಡುತ್ತೇವೆ ಎಂದರು.
ಇದೇ ವೇಳೆ, ಇತ್ತೀಚಿಗೆ ಕೋಲ್ಕತಾದಲ್ಲಿ ನಡೆದ ಪ್ರತಿಪಕ್ಷಗಳ ಮಹಾ ರ್ಯಾಲಿ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಬಿಜೆಪಿ ವಿರೋಧಿ ಪಕ್ಷಗಳು ರ್ಯಾಲಿಯಲ್ಲಿ ಒಂದೇ ಒಂದು ಸಲ ಭಾರತ್ ಮಾತಾ ಕಿ ಜೈ ಅಥವಾ ವಂದೇ ಮಾತರಂ ಹೇಳಲಿಲ್ಲ. ಆದರೆ ಮೋದಿ ಮೋದಿ ಎಂಬ ಘೋಷಣೆ ಕೂಗುವುದನ್ನು ಮರೆಯಲಿಲ್ಲ ಎಂದು ವ್ಯಂಗ್ಯವಾಡಿದರು.
ಪ್ರತಿಪಕ್ಷಗಳು ಅಧಿಕಾರಕ್ಕಾಗಿ ಮತ್ತು ಸ್ವಹಿತಾಸಕ್ತಿಗಾಗಿ ಮಹಾಘಟಬಂಧನ್ ರಚನೆ ಮಾಡಿಕೊಂಡಿವೆ ಎಂದು ಬಿಜೆಪಿ ಅಧ್ಯಕ್ಷ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT