ಮೋದಿ 
ದೇಶ

ನಮಗೆ ಪಕ್ಷವೇ ಕುಟುಂಬ, ಆದರೆ ಕೆಲವರಿಗೆ ಕುಟುಂಬವೇ ಪಕ್ಷ: ಪ್ರಿಯಾಂಕ ರಾಜಕೀಯ ಪ್ರವೇಶದ ಬಗ್ಗೆ ಮೋದಿ

ಪ್ರಿಯಾಂಕ ವಾಧ್ರ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

ನವದೆಹಲಿ: ಪ್ರಿಯಾಂಕ ವಾಧ್ರ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.  
ಮಹಾರಾಷ್ಟ್ರದ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ಕುಟುಂಬವನ್ನು ಆಧರಿಸಿ ಬಿಜೆಪಿಯಲ್ಲಿ ಯಾವುದೇ ನಿರ್ಧಾರಗಳನ್ನೂ ಕೈಗೊಳ್ಳಲಾಗಿಲ್ಲ. ಯಾರು ಯಾವ ಕುಟುಂಬದವರು ಎಂಬುದನ್ನು ಆಧರಿಸಿ ನಮ್ಮ ಪಕ್ಷದಲ್ಲಿ ನಿರ್ಧಾರ ಕೈಗೊಳ್ಳಲಾಗುವುದಿಲ್ಲ. ಆದ್ದರಿಂದಲೇ ಬಿಜೆಪಿಯಲ್ಲಿ ಪಕ್ಷವೇ ಕುಟುಂಬ ಎಂದು ಹೇಳಲಾಗುತ್ತದೆ ಆದರೆ ಕೆಲವರಿಗೆ ಕುಟುಂಬವೇ ಪಕ್ಷದಲ್ಲಿರುತ್ತದೆ ಎಂದು ಮೋದಿ ಪ್ರಿಯಾಂಕ ವಾಧ್ರ ರಾಜಕೀಯ ಪ್ರವೇಶದ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. 
ಮುಂದುವರೆದು ಮಾತನಾಡಿರುವ ಪ್ರಧಾನಿ ಮೋದಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪಾಲನೆ ಮಾಡುವ ಪಕ್ಷವೆಂದರೆ ಅದು ಬಿಜೆಪಿ ಮಾತ್ರ, ಬಿಜೆಪಿ ಕಾರ್ಯಕರ್ತರ ಪಕ್ಷ, ಪಕ್ಷವನ್ನು ಬೆಳೆಸಿರುವುದು ಕಾರ್ಯಕರ್ತರು, ಬಿಜೆಪಿ ಪಕ್ಷ ದೇಶಕ್ಕೆ ಸಮರ್ಪಿತವಾದದ್ದು. ಪ್ರಜಾಪ್ರಭುತ್ವ ನಮ್ಮ ಸಂಸ್ಕೃತಿಯ ಭಾಗ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT