ನಿರ್ಮಲಾ ಸೀತಾರಾಮನ್ 
ದೇಶ

ರಾಫೆಲ್ 2 ಜಿ ಅಥವಾ ಬೋಪೋರ್ಸ್ ಹಗರಣದಂತೆ ಅಲ್ಲ, ಜೆಪಿಸಿಯ ಅಗತ್ಯವಿಲ್ಲ- ನಿರ್ಮಲಾ ಸೀತಾರಾಮನ್

2 ಜಿ ಸ್ಪೆಕ್ಟ್ರಮ್ ಅಥವಾ ಬೋಪೋರ್ಸ್ ಹಗರಣದಂತೆ ರಾಫೆಲ್ ಒಪ್ಪಂದದಲ್ಲಿ ಹಣಕಾಸಿನ ಅವ್ಯವಹಾರ ನಡೆದಿಲ್ಲ . ಹೀಗಾಗಿ ಇದನ್ನು ಜಂಟಿ ಸಂಸದೀಯ ಸಮಿತಿ ಪರಾಮರ್ಶೆಗೆ ನೀಡಲು ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಚೆನ್ನೈ: 2 ಜಿ ಸ್ಪೆಕ್ಟ್ರಮ್ ಅಥವಾ ಬೋಪೋರ್ಸ್  ಹಗರಣದಂತೆ  ರಾಫೆಲ್ ಒಪ್ಪಂದದಲ್ಲಿ  ಹಣಕಾಸಿನ ಅವ್ಯವಹಾರ ನಡೆದಿಲ್ಲ .ಹೀಗಾಗಿ ಇದನ್ನು ಜಂಟಿ ಸಂಸದೀಯ ಸಮಿತಿ ಪರಾಮರ್ಶೆಗೆ ನೀಡಲು ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

2 ಜಿ ಸ್ಪೇಕ್ಟ್ರಮ್ ಹಗರಣದಂತೆ ರಾಫೆಲ್ ಒಪ್ಪಂದದ ವಿರುದ್ಧ ಸಿಎಜಿಯಂತಹ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿಲ್ಲ. ಈ ವಿಚಾರ ಸುಪ್ರೀಂಕೋರ್ಟ್ ಅಂಗಳಕ್ಕೂ ಹೋದಾಗಲೂ ಯುದ್ಧ ವಿಮಾನ ಖರೀದಿ , ದರ ನಿಗದಿ ಪ್ರಕ್ರಿಯೆ ಬಗ್ಗೆ ಸಮಾಧಾನ ವ್ಯಕ್ತಪಡಿಸಿದೆ ಎಂದರು.

ನಂತರ ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆಯಾಗಿ ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರೂ  ಪ್ರತಿಪಕ್ಷಗಳು ಕೇಳುತ್ತಿಲ್ಲ. 2 ಜಿ ಸ್ಪೇಕ್ಟ್ರಮ್  ಅಥವಾ ಬೋಪೋರ್ಸ್ ಹಗರಣದಲ್ಲಿ ಹಣದ ವರ್ಗಾವಣೆ ಹಾಗೂ ಕಳ್ಳ ಬ್ಯಾಂಕ್ ಖಾತೆಗೆ ಸಂಬಂಧಿಸಿದ ವಿವಾದಕ್ಕಾಗಿ ಜಂಟಿ ಸಂಸದೀಯ ಸಮಿತಿ ರಚಿಸಲಾಗಿತ್ತು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಅಲ್ಲದೇ , ರಾಫೆಲ್ ಒಪ್ಪಂದದಲ್ಲಿ ಕ್ವಟ್ರೋಚಿಯಂತಹ ಯಾವುದೇ ಮಧ್ಯವರ್ತಿಗಳಿಲ್ಲ. ಬೋಪೋರ್ಸ್ ಹಗರಣದ ಬಗ್ಗೆ ತುಟಿ ಬಿಚ್ಚದ ಕಾಂಗ್ರೆಸ್ ನಾಯಕರು ರಾಫೆಲ್ ಒಪ್ಪಂದ ಸಂಬಂಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT