ರಾಹುಲ್ ಗಾಂಧಿ 
ದೇಶ

ಪ್ರಿಯಾಂಕಾ,ಜ್ಯೋತಿರಾಧಿತ್ಯರಿಂದ ಉತ್ತರ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ-ರಾಹುಲ್

ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಉತ್ತರ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ಅಚಲ ವಿಶ್ವಾಸ ಹೊಂದಿರುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಲಖನೌ:  ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಉತ್ತರ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ಅಚಲ ವಿಶ್ವಾಸ ಹೊಂದಿರುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶ ಪೂರ್ವ ಹಾಗೂ ಪಶ್ಚಿಮದ ಉಸ್ತುವಾರಿಯಾಗಿ ಕ್ರಮವಾಗಿ ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರನ್ನು ನೇಮಕ ಮಾಡಿದ ಬಳಿಕ  ಅಮೇಥಿಯಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಇವರುಗಳ ಮೂಲಕ   ಅತ್ಯಂತ ಹಳೆಯ ಪಕ್ಷವಾಗಿರುವ  ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ  ಮತ್ತೆ ಅಧಿಕಾರಿಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರಿಗೆ ಉಸ್ತುವಾರಿ ವಹಿಸಲಾಗಿದೆ. ಈಗ ದೇಶದಲ್ಲಿ ಮೂವರು ಯೋಧರು ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡಲಿದ್ದು, ಪ್ರಿಯಾಂಕಾ ಗಾಂಧಿ ಹೊಸ ಅಧಿಕಾರ ವಹಿಸಿಕೊಂಡ ನಂತರ ಅಮೇಥಿ ಹಾಗೂ ರಾಯ್ ಬರೇಲಿಗೆ ಬರುವಂತೆ ಕೇಳಿದ್ದೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಅಧಿಕಾರಕ್ಕೆ ಬರುವ ಮುನ್ನ ಜನರ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದ್ದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಏನನ್ನೂ ಮಾಡಲಿಲ್ಲ. ಇದಕ್ಕೆ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್ ಗಡ ಚುನಾವಣೆಯಲ್ಲಿ ಏನು ಆಯಿತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ಸಿಬಿಐ ನಿರ್ದೇಶಕರ ವಜಾ, ರಾಫೆಲ್ ಒಪ್ಪಂದ ಕುರಿತಂತೆ  ಮಾತನಾಡಿದ ರಾಹುಲ್ ಗಾಂಧಿ, ಚೌಕಿದಾರ್ ಚೋರ್ ಹೈ ಎಂದು ಘೋಷಣೆ ಕೂಗಿದರು.
ನೋಟ್ ಅಮಾನ್ಯತೆಯಿಂದ ಸಹಸ್ರಾರು ಜನರು ತೊಂದರೆ ಅನುಭವಿಸುವಂತಾಯಿತು. ಆದರೆ, ಉದ್ಯಮಿಗಳು ಯಾರೂ ಎಟಿಎಂಗಳ ಮುಂದೆ ಸಾಲಿನಲ್ಲಿ ನಿಲ್ಲಲಿಲ್ಲ  , ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೇಂದ್ರ ಹಾಗೂ ರಾಜ್ಯಸರ್ಕಾರದಿಂದ ಕಿತ್ತು ಹಾಕಿರುವ ಎಲ್ಲಾ ಯೋಜನೆಗಳನ್ನು ಮತ್ತೆ ಆರಂಭಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT