ಬಾಬಾ ರಾಮ್ ದೇವ್ 
ದೇಶ

ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮತದಾನದ ಹಕ್ಕು, ಸರ್ಕಾರಿ ನೌಕರಿ ನಿಷೇಧಿಸಿ: ಬಾಬಾ ರಾಮ್ ದೇವ್

ಎರಡಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಮತದಾನದ ಹಕ್ಕು ನೀಡಬಾರದು, ಯಾವುದೇ ಸರ್ಕಾರಿ ಯೋಜನೆ ಸೌಲಭ್ಯ ಕಲ್ಪಿಸಬಾರದು ಎಂದು ಪತಂಜಲಿ ಸಂಸ್ಥೆಯ.....

ನವದೆಹಲಿ: ಎರಡಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಮತದಾನದ ಹಕ್ಕು ನೀಡಬಾರದು, ಯಾವುದೇ ಸರ್ಕಾರಿ ಯೋಜನೆ ಸೌಲಭ್ಯ ಕಲ್ಪಿಸಬಾರದು ಎಂದು ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಎರಡು ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಿಷೇಧ ಹೇರಬೇಕು.ಸರ್ಕಾರಿ ಶಾಲೆ, ಆಸ್ಪತ್ರೆಗಳ ಬಳಕೆ ಮಾಡದಂತೆ ನಿರ್ಬಂಧಿಸಬೇಕು.ಸರ್ಕಾರಿ ಉದ್ಯೋಗ ಸಹ ದೊರಕಬಾರದ್ದು ಹೀಗೇನಾದರೂ ಮಾಡಿದರೆ ಜನಸಂಖ್ಯೆ ತಾನೇ ತಾನಾಗಿ ನಿಯಂತ್ರಣಕ್ಕೆ ಬರಲಿದೆ. ಎಂದು ಅವರು ಹೇಳಿದ್ದರೆ.
ಅಲಿಘಡದಲ್ಲಿ ಪತಂಜಲಿ ಗಾರ್ಮೆಂಟ್ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.
ಇನ್ನು ರಾಮ್ ದೇವ್ ಇಂತಹಾ ಹೇಳಿಕೆ ನೀಡುವುದೇನೂ ಇದೇ ಮೊದಲಲ್ಲ.ಕಳೆದ ವರ್ಷ ನವೆಂಬರ್ ನಲ್ಲಿ "ನನ್ನಂತೆ ವಿವಾಹವಾಗದವರಿಗೆ ಈ ದೇಶದಲ್ಲಿ ವಿಶೇಷ ಗೌರವ ಸಲ್ಲುವಂತಾಗಬೇಕು.ಇಬ್ಬರು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಮತದಾನದ ಹಕ್ಕು ನಿರಾಕರಿಸಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT