ಧ್ವಜಾರೋಹಣ ಮಾಡಿದ ರಾಷ್ಟ್ರಪತಿ ಕೋವಿಂದ್ 
ದೇಶ

70ನೇ ಗಣರಾಜ್ಯೋತ್ಸವ: ದೆಹಲಿಯಲ್ಲಿ ಧ್ವಜಾರೋಹಣ ಮಾಡಿದ ರಾಷ್ಟ್ರಪತಿ ಕೋವಿಂದ್

70ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ನಿಮಿತ್ತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದರು.

ನವದೆಹಲಿ: 70ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ನಿಮಿತ್ತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದರು.
ದೆಹಲಿಯಲ್ಲಿ ಇಂದು 70ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆಯುತ್ತಿದ್ದು, ದಟ್ಟ ಮಂಜು ಕವಿದ ವಾತಾವರಣವಿದ್ದರಿಂದ ದ್ವಜಾರೋಹಣವನ್ನು ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಯಿತು.ದೆಹಲಿಯ ರಾಜಪಥ್​​ನಲ್ಲಿ ಗಣರಾಜ್ಯೋತ್ಸವ ಪರೇಡ್​ ಆರಂಭವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅಸ್ಸಾಂ ರೈಫಲ್ಸ್​​ನ ಆಲ್​ ವುಮೆನ್​ ಕಾಂಟಿಂಜೆಂಟ್ ರಾಜಪಥ್​​ನಲ್ಲಿ ಪಥಸಂಚಲನ ಮಾಡುತ್ತಿವೆ. 
ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​​, 'ಭಾರತದ ಬಹುಸಾಂಸ್ಕೃತಿಕತೆಯೇ ದೇಶದ ಶಕ್ತಿ. ವೈವಿಧ್ಯತೆ, ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಯ ಮೇಲೆ ಭಾರತದ ಮಾಡೆಲ್​​ ನಿಂತಿದೆ ಎಂದರು. ಇದೇ ವೇಳೆ ಕೋವಿಂದ್​, ಮೇಲ್ವರ್ಗ ಮೀಸಲಾತಿಗೆ ಬೆಂಬಲ ಸೂಚಿಸಿದ್ರು. ಇದು ಮಹಾತ್ಮಾ ಗಾಂಧಿ ಕನಸಿನ ಭಾರತದತ್ತ ಮತ್ತೊಂದು ಹೆಜ್ಜೆ ಎಂದು ಹೇಳಿದರು.
ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅಮರ್​ ಜವಾನ್​​ ಜ್ಯೋತಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕ ಚಾಲನೆ ನೀಡಿದರು.  ಬಳಿಕ ರಾಜಪಥಕ್ಕೆ ಆಗಮಿಸಿದ ಪ್ರಧಾನಿ ಮೋದಿ ಗಣರಾಜ್ಯೋತ್ಸವ ಕಾರ್ಯಕ್ರಮದ ಅತಿಥಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರನ್ನು ಸ್ವಾಗತಿಸಿದರು. 
ಇದೇ ವೇಳೆ ಹುತಾತ್ಮ ಯೋಧ ಲ್ಯಾನ್ಸ್​ ನಾಯಕ್​​ ನಾಜಿರ್​ ಅಹ್ಮದ್​ ವಾನಿ ಅವರಿಗೆ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ನೀಡಿದರು. ವಾನಿ ಅವರ ಪತ್ನಿ ಮಹಾಜಬೀನ್ ರಾಷ್ಟ್ರಪತಿಗಳಿಂದ​​ ಪ್ರಶಸ್ತಿ ಸ್ವೀಕರಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT