ಪಾಪ.. 'ಭಾರತ ರತ್ನ'ಕ್ಕೆ ಶಿವಕುಮಾರಸ್ವಾಮಿಗಳ ದರ್ಶನ ಭಾಗ್ಯವೇ ಇಲ್ಲ 
ದೇಶ

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಘೋಷಿಸದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ

ಗಣರಾಜ್ಯೋತ್ಸವ ದಿನಾಚರಣೆ ಹಿಂದಿನ ದಿನ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಪ್ರಣಬ್ ಮುಖರ್ಜಿ, ನಾನಾಜಿ ದೇಶ್ ಮುಖ್ ಹಾಗೂ ಹೆಸರಾಂತ ಗಾಯಕ ಭೂಪೆನ್ ಹಜಾರಿಕಾ ಅವರಿಗೆ ಭಾರತ ರತ್ನ

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಹಿಂದಿನ ದಿನ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಪ್ರಣಬ್ ಮುಖರ್ಜಿ, ನಾನಾಜಿ ದೇಶ್ ಮುಖ್ ಹಾಗೂ  ಹೆಸರಾಂತ ಗಾಯಕ ಭೂಪೆನ್ ಹಜಾರಿಕಾ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ. 
ಈ ಬಾರಿಯಾದರೂ ಸಿದ್ಧಗಂಗೆಯ ಸಂತ ಶಿವಕುಮಾರ ಸ್ವಾಮಿಗಳ  ಸನ್ನಿಧಿ ಸೇರಿ ಭಾರತ ಪ್ರಶಸ್ತಿ ಸಾರ್ಥಕತೆ ಪಡೆದುಕೊಳ್ಳುತ್ತದೆ ಎಂದು ಭಾವಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದ್ದು,  ಸಾಮಾಜಿಕ ಜಾಲತಾಣಗಳಲ್ಲಿ ಜನರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. 
ಡಾ. ಶಿವಕುಮಾರ ಸ್ವಾಮಿಗಳಿಗೆ ಭಾರತ ರತ್ನ ನೀಡದೇ ಇದ್ದರೂ ಸಹ ಅವರ ಘನತೆ ಭಾರತ ರತ್ನಕ್ಕಿಂತ ದೊಡ್ಡದು ಎಂದು ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರೆ, ಮತ್ತೆ ಕೆಲವರು ಮೋದಿ ಸರ್ಕಾರಕ್ಕೆ ಭಾರತ ರತ್ನ ಪ್ರಶಸ್ತಿ ನೀಡುವಾಗ ಶಿವಕುಮಾರ ಸ್ವಾಮಿಗಳು ನೆನಪಾಗಲಿಲ್ಲವೇ, ಜನ ನಿಮ್ಮನ್ನ ಲೋಕಸಭಾ ಚುನಾವಣೆ ವೇಳೆ ವಿಚಾರಿಸಿಕೊಳ್ಳಲಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT