18 ಸಾವಿರ ಅಡಿ ಎತ್ತರದಲ್ಲಿ ತ್ರಿವರ್ಣ ಧ್ಲಜ ಹಾರಿಸಿದ ಯೋಧರು 
ದೇಶ

ಮೈನಸ್​ 30 ಡಿಗ್ರಿ ತಾಪಮಾನದ ನಡುವೆಯೇ 18 ಸಾವಿರ ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಯೋಧರು

ದೇಶಾದ್ಯಂತ 70ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಅತ್ತ ಇಂಡೋ- ಟಿಬೆಟಿಯನ್​ ಗಡಿಯಲ್ಲೂ ಭಾರತೀಯ ಸೇನೆಯ ಯೋಧರು ಮೈನಸ್​ 30 ಡಿಗ್ರಿ ತಾಪಮಾನದ ನಡುವೆ ಧ್ವಜಾರೋಹಣ ಮಾಡಿ ಸಂಭ್ರಮಿಸಿದ್ದಾರೆ.

ನವದೆಹಲಿ: ದೇಶಾದ್ಯಂತ 70ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಅತ್ತ ಇಂಡೋ- ಟಿಬೆಟಿಯನ್​ ಗಡಿಯಲ್ಲೂ ಭಾರತೀಯ ಸೇನೆಯ ಯೋಧರು ಮೈನಸ್​ 30 ಡಿಗ್ರಿ ತಾಪಮಾನದ ನಡುವೆ ಧ್ವಜಾರೋಹಣ ಮಾಡಿ ಸಂಭ್ರಮಿಸಿದ್ದಾರೆ.
ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಎಂದೇ ಖ್ಯಾತಿ ಗಳಿಸಿರುವ ಲಡಾಖ್ ನಲ್ಲೂ ಭಾರತೀಯ ಯೋಧರು ತ್ರಿವರ್ಣ ಧ್ವಜಾರೋಹಣ ಮಾಡುವ ಮೂಲಕ 70ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ಮಾಡಿದರು. ಸಮುದ್ರ ಮಟ್ಟದಿಂದ ಸುಮಾರು18 ಸಾವಿರ ಅಡಿ ಎತ್ತರದ ಲಡಾಖ್ ಯುದ್ಧ ಭೂಮಿಯಲ್ಲಿ ಇಂಡೋ- ಟಿಬೆಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿ ಧ್ವಜಾರೋಹಣ ಮಾಡಿದರು. ಈ ಪ್ರದೇಶ ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಎಂದೇ ಖ್ಯಾತಿಗಳಿಸಿದ್ದು, ಮೈನಸ್ 30 ಡಿಗ್ರಿ ತಾಪಮಾನ ಹೊಂದಿದೆ. ಇಂತಹ ರಣ ಭಯಂಕರ ಚಳಿಯ ನಡುವೆಯೇ ಸೈನಿಕರು ಧ್ವಜಾರೋಹಣ ಮಾಡಿ ತಮ್ಮ ದೇಶ ಪ್ರೇಮ ಮೆರೆದಿದ್ದಾರೆ.
ಅಟ್ಟಾರಿ-ವಾಘಾ ಗಡಿಯಲ್ಲಿ ಸೈನಿಕರಿಂದ ಸಿಹಿ ಹಂಚಿಕೆ
ಇನ್ನು ಗಣರಾಜ್ಯೋತ್ಸವ ಸಂಭ್ರಮಾಚರಣೆ ನಿಮಿತ್ತ ಇಂಡೋ-ಪಾಕ್ ಗಡಿಯಲ್ಲಿ ಭಾರತೀಯ ಸೈನಿಕರು ಪಾಕಿಸ್ತಾನದ ಸೈನಿಕಾಧಿಕಾರಿಗಳಿಗೆ ಸಿಹಿ ತಿನ್ನಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಪಾಕಿಸ್ತಾನಿ ಸೈನಿಕರಿಗೆ ಇಂದು ಬೆಳಗ್ಗೆ ಸಿಹಿ ತಿನ್ನಿಸಿದರು. ಅಲ್ಲದೆ ಪಾಕ್ ಸೇನಾಧಿಕಾರಿಗಳೂ ಕೂಡ ಭಾರತೀಯ ಅಧಿಕಾರಿಗಳಿಗೆ ಶುಭಾಶಯ ಕೋರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT