ಕೃಷ್ಣಾ ಸೊಬ್ತಿ 
ದೇಶ

ಜ್ಞಾನಪೀಠ ಪುರಷ್ಕೃತ ಹಿಂದಿ ಲೇಖಕಿ ಕೃಷ್ಣಾ ಸೊಬ್ತಿ ನಿಧನ

ಖ್ಯಾತ ಹಿಂದಿ ಸಾಹಿತಿ ಕೃಷ್ಣಾ ಸೊಬ್ತಿ ನಿಧನರಾಗಿದ್ದಾರೆ ಎಂದು ಅವರು ಕುಟುಂಬ ಮೂಲಗಳಿಂದ ತಿಳಿದುಬಂದಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ನವದೆಹಲಿ:  ಖ್ಯಾತ ಹಿಂದಿ ಸಾಹಿತಿ ಕೃಷ್ಣಾ ಸೊಬ್ತಿ ನಿಧನರಾಗಿದ್ದಾರೆ ಎಂದು ಅವರು ಕುಟುಂಬ ಮೂಲಗಳಿಂದ ತಿಳಿದುಬಂದಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದಾಗಿ ಕಳೆದ ಎರಡು ತಿಂಗಳಿನಿಂದ ದೆಹಲಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ   ಕೃಷ್ಣಾ ಸೊಬ್ತಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ರಾಜ್ ಕಮಲ್ ಪ್ರಕಾಶನ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅವರ ಸ್ನೇಹಿತೆ ಅಶೋಕ್ ಮಹೇಶ್ವರಿ ತಿಳಿಸಿದ್ದಾರೆ.

ಕಳೆದೊಂದು ವಾರದಿಂದ ಐಸಿಯುನಲ್ಲಿದ್ದರೂ ಸಮಾಜದಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಚೆನ್ನಾಗಿ ಅರಿವಿತ್ತು ಎಂಬುದಾಗಿ ಮಹೇಶ್ವರಿ ತಿಳಿಸಿದ್ದಾರೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಗುಜರಾತಿನಲ್ಲಿ 1925ರಲ್ಲಿ ಜನಿಸಿದ ಕೃಷ್ಣಾ ಸೊಬ್ತಿ  ತಮ್ಮ ಹೊಸ ಶೈಲಿಯ ಬರಹದಿಂದ ಪ್ರಸಿದ್ಧಿಯಾಗಿದ್ದರು. ಹಿಂದಿ, ಉರ್ದು, ಮತ್ತು ಪಂಜಾಬಿ ಸಂಸ್ಕೃತಗಳ ಪ್ರಭಾವ ಇವರ ಕೃತಿಯಲ್ಲಿನ ಪದಗಳ ಬಳಕೆಯಲ್ಲಿ ಮೇಳೈಸಿದೆ.
ಅವರ ಹಲವಾರು ಕೃತಿಗಳನ್ನು ಇತರ ಭಾರತೀಯ ಭಾಷೆಗಳಿಗಷ್ಟೇ ಅಲ್ಲ, ಸ್ಪೀಡಿಷ್, ರಷ್ಯನ್ ಮತ್ತು ಇಂಗ್ಲೀಷ್ ಭಾಷೆಗೂ ಅನುವಾದ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT