ಜಗನ್ ರೆಡ್ಡಿ 
ದೇಶ

ಆಂಧ್ರದಲ್ಲಿ ರಾಜಕೀಯ ಬೆಳವಣಿಗೆ: ಜಗನ್ ರೆಡ್ಡಿ ಭೇಟಿ ಮಾಡಿದ ಎನ್ ಟಿಆರ್ ಅಳಿಯ, ವೈಎಸ್ ಆರ್ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

2019 ರ ಲೋಕಸಭಾ ಚುನಾವಣೆಗಾಗಿ ಮೋದಿ ವಿರುದ್ಧ ಇತ್ತ ಮಹಾಘಟಬಂಧನ್ ರಚನೆಯಾಗುತ್ತಿದ್ದಂತೆಯೇ ಆಂಧ್ರಪ್ರದೇಶದ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

2019 ರ ಲೋಕಸಭಾ ಚುನಾವಣೆಗಾಗಿ ಮೋದಿ ವಿರುದ್ಧ ಇತ್ತ ಮಹಾಘಟಬಂಧನ್ ರಚನೆಯಾಗುತ್ತಿದ್ದಂತೆಯೇ ಆಂಧ್ರಪ್ರದೇಶದ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 
ಆಂಧ್ರದ ಮಾಜಿ ಸಿಎಂ ಎನ್ ಟಿಆರ್ ಅವರ ಹಿರಿಯ ಅಳಿಯ ದಗ್ಗುಬಾಟಿ ವೆಂಕಟೇಶ್ವರ ರಾವ್ ಜ.27 ರಂದು ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. 
ಹೈದರಾಬಾದ್ ನ ಲೋಟಸ್ ಪಾಂಡ್ ನಲ್ಲಿ ಈ ಭೇಟಿ ನಡೆದಿದ್ದು, ವೆಂಕಟೇಶ್ವರ ರಾವ್  ವೈಎಸ್ ಆರ್ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬಿಜೆಪಿಯಲ್ಲಿರುವ ಎನ್ ಟಿ ಆರ್ ಪುತ್ರಿ ಡಿ ಪುರಂದರೇಶ್ವರಿ ಅವರ ಪತಿ ವೆಂಕಟೇಶ್ವರ್ ರಾವ್ ತಮ್ಮ ಪುತ್ರ ಹಿತೇಶ್ ಚೆಂಚುರಾಮ್ ಅವರೊಂದಿಗೆ ತೆರಳಿ ವೈಎಸ್ ಆರ್ ಕಾಂಗ್ರೆಸ್ ಸೇರ್ಪಡೆಗೊಳ್ಳುವುದಕ್ಕೆ ತಯಾರಿ ನಡೆಸಿದ್ದಾರೆ.
ಜಗನ್ ಮೋಹನ್ ರೆಡ್ಡಿ ಭೇಟಿ ಬಳಿಕ ಮಾತನಾಡಿರುವ ವೆಂಕಟೇಶ್ವರ ರಾವ್ ಅವರು ತಮ್ಮ ಮುಂದಿನ ನಡೆ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT