ನರೇಂದ್ರ ಮೋದಿ 
ದೇಶ

ಮನ್ ಕೀ ಬಾತ್ ನಲ್ಲಿ ಸಿದ್ದಗಂಗಾ ಶ್ರಿಗಳನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ಬಸವಣ್ಣನವರು ಕಾಯಕವೇ ಕೈಲಾಸ ಎಂದು ನಂಬಿದ್ದರು, ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಬಸವಣ್ಣನನರ ಮಾರ್ಗದಲ್ಲಿ ಸಾಗಿದರು ...

ನವದೆಹಲಿ: ಬಸವಣ್ಣನವರು ಕಾಯಕವೇ ಕೈಲಾಸ ಎಂದು ನಂಬಿದ್ದರು,  ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಬಸವಣ್ಣನನರ ಮಾರ್ಗದಲ್ಲಿ ಸಾಗಿದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
2019ನೇ ಇಸವಿಯಲ್ಲಿ ಮೊದಲನೆ ಬಾರಿಗೆ  ರೇಡಿಯೋ ಕಾರ್ಯಕ್ರಮ  ಮನ್  ಕೀ ಬಾತ್ ನಲ್ಲಿ ಮಾತನಾಡಿದ ನರೇಂದ್ರ ಮೋದಿ, ಜನವರಿ ತಿಂಗಳಲ್ಲಿ ನಾವು ಒಂದು ಕೆಟ್ಟ ಸುದ್ದಿ ಕೇಳಿದೆವು, ಅದು ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿದ್ದ 111 ವರ್ಷ ಸಿದ್ದಗಂಗಾ ಶ್ರಿಗಳು ನಿಧನರಾಗಿದ್ದು, ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ, ಸಾವಿರಾರು ಮಂದಿಗೆ ಶಿಕ್ಷಣ, ಊಟ ವಸತಿ ನೀಡಲು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು ಎಂದು ಹೇಳಿದ್ದಾರೆ.
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಗಳಲ್ಲಿ ಚುನಾವಣಾ ಆಯೋಗ ವ್ಯವಸ್ಥಿತ ವಾಗಿ ಚುನಾವಣೆ ನಡೆಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ, 
ಇನ್ನೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟುಹಬ್ಬದ ಅಂಗವಾಗಿ ಜನವರಿ 23 ರಂದು ಅವರ ವಸ್ತು ಸಂಗ್ರಹಾಲಯವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು.ಸಾರ್ವಜನಿಕರ ಒತ್ತಾಯವನ್ನು ಪೂರ್ಣಗೊಳಿಸಿದ್ದು ಸಂತೋಷ ತಂದಿದೆ ಎಂದು ಹೇಳಿದ್ದಾರೆ .

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT