ಪ್ರಧಾನಿ ಮೋದಿ 
ದೇಶ

ಶಬರಿಮಲೆ ವಿವಾದ: ಕೇರಳ ಸಂಸ್ಕೃತಿಗೆ ಎಡ ಸರ್ಕಾರದಿಂದ ಅಗೌರವ- ಪ್ರಧಾನಿ ಮೋದಿ

ಕಮ್ಯೂನಿಸ್ಟ್ ಸರ್ಕಾರ ಕೇರಳದ ಸಂಸ್ಕೃತಿಯನ್ನು ಅಗೌರವ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ತ್ರಿಶೂರ್ : ಶಬರಿಮಲೆ ವಿವಾದ ಇಡೀ ದೇಶದ ಗಮನ ಸೆಳೆದಿದ್ದು, ದೇಶದ ಜನತೆ ಮಾನವೀಯ ದೃಷ್ಟಿಯಿಂದ ನೋಡುತ್ತಿದ್ದರೆ ಕಮ್ಯೂನಿಸ್ಟ್ ಸರ್ಕಾರ  ಕೇರಳದ ಸಂಸ್ಕೃತಿಯನ್ನು ಅಗೌರವ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ತ್ರಿಶೂರಿನಲ್ಲಿ ಇಂದು ಆಯೋಜಿಸಿದ್ದ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್  ಪಕ್ಷವಾಗಲೀ ಅಥವಾ ಕಮ್ಯೂನಿಸ್ಟ್ ಪಕ್ಷವಾಗಲೀ  ಮಹಿಳೆಯರ ಸಬಲೀಕರಣದತ್ತ ಏನೂ ಮಾಡಿಲ್ಲ, ತ್ರಿವಳಿ ತಲಾಖ್ ನಿಷೇಧಕ್ಕೂ ಕಾಂಗ್ರೆಸ್
ಬೆಂಬಲಿಸುತ್ತಿಲ್ಲ ಎಂದರು.

 ಭಾರತದಲ್ಲಿ ಹಲವು ಮಹಿಳಾ ಮುಖ್ಯಮಂತ್ರಿಗಳು ಆಡಳಿತ ನಡೆಸಿದ್ದಾರೆ. ಆದರೆ, ಕಮ್ಯೂನಿಸ್ಟ್ ಪಕ್ಷದಲ್ಲಿ ಒಬ್ಬ ಮಹಿಳಾ ನಾಯಕಿಯೂ ಇಲ್ಲ ಎಂದರು.

 ವಿಜ್ಞಾನಿ ನಂಬಿ ನಾರಾಯಣ್  ಬಂಧಿಸಿದ ಯುಡಿಎಫ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಎರಡು ದಶಕಗಳಿಗೂ ಹೆಚ್ಚು  ಕಾಲ ಇಸ್ರೋದಲ್ಲಿ ಶ್ರಮಿಸಿದ್ದ ನಂಬಿ ನಾರಾಯಣ್ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿತ್ತು.ಆದರೆ, ಎನ್ ಡಿಎ ಸರ್ಕಾರ ಅವರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT