ರವಿಶಂಕರ್ ಪ್ರಸಾದ್ 
ದೇಶ

ಆದಷ್ಟು ಬೇಗ ಆಯೋಧ್ಯ ವಿವಾದ ಇತ್ಯರ್ಥವಾಗಬೇಕು: ರವಿಶಂಕರ್ ಪ್ರಸಾದ್

ಸುಪ್ರೀಂ ಕೋರ್ಟ್ ಅಯೋಧ್ಯ ವಿವಾದ ವಿಚಾರಣೆ ಮುಂದೂಡಿದ ಬೆನ್ನಲ್ಲೇ ಆದಷ್ಟು ಬೇಗ ಅಯೋಧ್ಯ ವಿವಾದ ಇತ್ಯರ್ಥಪಡಿಸಬೇಕು ಎಂದು....

ನವದೆಹಲಿ: ಸುಪ್ರೀಂ ಕೋರ್ಟ್ ಅಯೋಧ್ಯ ವಿವಾದ ವಿಚಾರಣೆ ಮುಂದೂಡಿದ ಬೆನ್ನಲ್ಲೇ ಆದಷ್ಟು ಬೇಗ ಅಯೋಧ್ಯ ವಿವಾದ ಇತ್ಯರ್ಥಪಡಿಸಬೇಕು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಸೋಮವಾರ ಹೇಳಿದ್ದಾರೆ.
ಶುಕ್ರವಾರವಷ್ಟೇ ಅಯೋಧ್ಯ ವಿವಾದ ವಿಚಾರಣೆಗೆ ಸಂಬಂಧಿಸಿದಂತೆ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ರಚಿಸಲಾಗಿತ್ತು. ಆದರೆ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಜನವರಿ 29 ರಂದು ನಡೆಯಬೇಕಿದ್ದ ಅಯೋಧ್ಯ ವಿವಾದದ ವಿಚಾರಣೆ ಮುಂದೂಡಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ರವಿಶಂಕರ್ ಪ್ರಸಾದ್ ಅವರು, ಎಪ್ಪತ್ತು ವರ್ಷಗಳಿಂದ ಇತ್ಯರ್ಥವಾಗದೆ ಉಳಿದಿರುವ ಅಯೋಧ್ಯೆ ವಿವಾದಕ್ಕೆ ಆದಷ್ಟು ಬೇಗ ತಿಲಾಂಜಲಿ ಹಾಡಬೇಕು ಎಂದಿದ್ದಾರೆ.
ಈ ದೇಶದ ಜನ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದನ್ನು ನೋಡಲು ತವಕದಿಂದ ಕಾಯುತ್ತಿದ್ದಾರೆ. ಒಬ್ಬ ನಾಗರಿಕನಾಗಿ ನಾನು ಹೇಳುವುದಿಷ್ಟೆ. ಎಪ್ಪತ್ತು ವರ್ಷಗಳಿಂದ ಇತ್ಯರ್ಥವಾಗದೆ ಉಳಿದ ಈ ಪ್ರಕರಣ ಆದಷ್ಟು ಬೇಗ ಬಗೆಹರಿಯಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT