ಸಂಗ್ರಹ ಚಿತ್ರ 
ದೇಶ

ಭರವಸೆ ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ: ಗಡ್ಕರಿ ಹೇಳಿದ್ದು ಯಾರಿಗೆ?

ಜನರಿಗೆ ಭರವಸೆ ನೀಡಿ, ಆ ಕೆಲಸ ಈ ಕೆಲಸ ಎಂಬ ಕನಸು ಹುಟ್ಟಿಸಿ ಬಳಿಕ ಅದನ್ನು ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ...

ನವದೆಹಲಿ: ಜನರಿಗೆ ಭರವಸೆ ನೀಡಿ, ಆ ಕೆಲಸ ಈ ಕೆಲಸ ಎಂಬ ಕನಸು ಹುಟ್ಟಿಸಿ ಬಳಿಕ ಅದನ್ನು ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ ಎಂದು ಹೇಳಿದ್ದ ನಿತಿನ್ ಗಡ್ಕರಿ ನೇರವಾಗಿ ಪ್ರಧಾನಿ ಮೋದಿ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಗಡ್ಕರಿ, ಸಾಮಾನ್ಯವಾಗಿ ಪ್ರಜೆಗಳು ಭರವಸೆ ನೀಡುವ, ಹೊಸ ಜೀವನದ ಕನಸುಗಳನ್ನು ಬಿತ್ತುವ ನಾಯಕನನ್ನು ಮೆಚ್ಚಿಕೊಳ್ಳುತ್ತಾರೆ. ಆದರೆ ಆ ನಾಯಕ ನೀಡಿದ ಭರವಸೆ ಈಡೇರದಿದ್ದರೆ ಅವರ ಕನಸುಗಳು ಭಗ್ನವಾಗುತ್ತದೆ. ಹೀಗಾಗಿ ಸುಳ್ಳು ಭರವಸೆ ನೀಡಿ ಅದನ್ನು ಈಡೇರಿಸದ ನಾಯಕರನ್ನು ಸಾರ್ವಜನಿಕರು ಸೋಲಿಸುತ್ತಾರೆ ಎಂದು ಹೇಳಿದ್ದರು.
ಇದೀಗ ಗಡ್ಕರಿ ಅವರ ಈ ಹೇಳಿಕೆ ರಾಷ್ಟ್ರ ರಾಜಕೀಯದಲ್ಲಿ ಹೊಸದೊಂದು ಬಿರುಗಾಳಿಯನ್ನೇ ಎಬ್ಬಿಸಿದ್ದು, ಪ್ರಧಾನಿ ಹುದ್ದೆಯ ಮೇಲೆ ಕಣ್ಣಿರಿಸಿರುವ ಗಡ್ಕರಿ ನೇರವಾಗಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಅಲ್ಲದೆ ಪ್ರಧಾನಿ ಮೋದಿ ಅವರೇ ನಿಮ್ಮ ವಿರುದ್ಧ ಧನಿ ಎತ್ತಬಲ್ಲ ಮಂದಿ ಆಗಮಿಸುತ್ತಿದ್ದಾರೆ ಎಂದು ಮಧ್ಯ ಪ್ರದೇಶ ಕಾಂಗ್ರೆಸ್ ಸಚಿವರು ಹೇಳಿದ್ದಾರೆ.
ಇದೇ ಮಾತನ್ನು ಮುಂದುವರೆಸಿರುವ ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಗಡ್ಕರಿ ಹೇಳಿಕೆ ಮೋದಿ ಸರ್ಕಾರಕ್ಕೆ ಹಿಡಿದ ಕನ್ನಡಿಯಾಗಿದ್ದು, ಸೂಕ್ಷ್ಮ ರೀತಿಯದ್ದಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆ ನಿತಿನ್ ಗಡ್ಕರಿ ಹೇಳಿಕೆ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT