ಸಂಗ್ರಹ ಚಿತ್ರ 
ದೇಶ

ಭರವಸೆ ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ: ಗಡ್ಕರಿ ಹೇಳಿದ್ದು ಯಾರಿಗೆ?

ಜನರಿಗೆ ಭರವಸೆ ನೀಡಿ, ಆ ಕೆಲಸ ಈ ಕೆಲಸ ಎಂಬ ಕನಸು ಹುಟ್ಟಿಸಿ ಬಳಿಕ ಅದನ್ನು ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ...

ನವದೆಹಲಿ: ಜನರಿಗೆ ಭರವಸೆ ನೀಡಿ, ಆ ಕೆಲಸ ಈ ಕೆಲಸ ಎಂಬ ಕನಸು ಹುಟ್ಟಿಸಿ ಬಳಿಕ ಅದನ್ನು ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ ಎಂದು ಹೇಳಿದ್ದ ನಿತಿನ್ ಗಡ್ಕರಿ ನೇರವಾಗಿ ಪ್ರಧಾನಿ ಮೋದಿ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಗಡ್ಕರಿ, ಸಾಮಾನ್ಯವಾಗಿ ಪ್ರಜೆಗಳು ಭರವಸೆ ನೀಡುವ, ಹೊಸ ಜೀವನದ ಕನಸುಗಳನ್ನು ಬಿತ್ತುವ ನಾಯಕನನ್ನು ಮೆಚ್ಚಿಕೊಳ್ಳುತ್ತಾರೆ. ಆದರೆ ಆ ನಾಯಕ ನೀಡಿದ ಭರವಸೆ ಈಡೇರದಿದ್ದರೆ ಅವರ ಕನಸುಗಳು ಭಗ್ನವಾಗುತ್ತದೆ. ಹೀಗಾಗಿ ಸುಳ್ಳು ಭರವಸೆ ನೀಡಿ ಅದನ್ನು ಈಡೇರಿಸದ ನಾಯಕರನ್ನು ಸಾರ್ವಜನಿಕರು ಸೋಲಿಸುತ್ತಾರೆ ಎಂದು ಹೇಳಿದ್ದರು.
ಇದೀಗ ಗಡ್ಕರಿ ಅವರ ಈ ಹೇಳಿಕೆ ರಾಷ್ಟ್ರ ರಾಜಕೀಯದಲ್ಲಿ ಹೊಸದೊಂದು ಬಿರುಗಾಳಿಯನ್ನೇ ಎಬ್ಬಿಸಿದ್ದು, ಪ್ರಧಾನಿ ಹುದ್ದೆಯ ಮೇಲೆ ಕಣ್ಣಿರಿಸಿರುವ ಗಡ್ಕರಿ ನೇರವಾಗಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಅಲ್ಲದೆ ಪ್ರಧಾನಿ ಮೋದಿ ಅವರೇ ನಿಮ್ಮ ವಿರುದ್ಧ ಧನಿ ಎತ್ತಬಲ್ಲ ಮಂದಿ ಆಗಮಿಸುತ್ತಿದ್ದಾರೆ ಎಂದು ಮಧ್ಯ ಪ್ರದೇಶ ಕಾಂಗ್ರೆಸ್ ಸಚಿವರು ಹೇಳಿದ್ದಾರೆ.
ಇದೇ ಮಾತನ್ನು ಮುಂದುವರೆಸಿರುವ ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಗಡ್ಕರಿ ಹೇಳಿಕೆ ಮೋದಿ ಸರ್ಕಾರಕ್ಕೆ ಹಿಡಿದ ಕನ್ನಡಿಯಾಗಿದ್ದು, ಸೂಕ್ಷ್ಮ ರೀತಿಯದ್ದಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆ ನಿತಿನ್ ಗಡ್ಕರಿ ಹೇಳಿಕೆ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT