ಸಿದ್ದರಾಮಯ್ಯ, ಮಹಿಳೆ 
ದೇಶ

ಮಹಿಳೆಗೆ ಆವಾಜ್: ಮಹಿಳಾ ಆಯೋಗದಿಂದ ಸಿದ್ದರಾಮಯ್ಯ ವಿರುದ್ಧ ದೂರು, ಆಕಸ್ಮಿಕ ಘಟನೆ ಎಂದ ಮಾಜಿ ಸಿಎಂ

ಮೈಸೂರಿನ ವರುಣ ಕ್ಷೇತ್ರದಲ್ಲಿ ಜನರ ಸಮಸ್ಯೆ ಆಲಿಸುತ್ತಿದ್ದ ವೇಳೆ ತಮ್ಮನ್ನು ಪ್ರಶ್ನಿಸಿದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ....

ನವದೆಹಲಿ: ಮೈಸೂರಿನ ವರುಣ ಕ್ಷೇತ್ರದಲ್ಲಿ ಜನರ ಸಮಸ್ಯೆ ಆಲಿಸುತ್ತಿದ್ದ ವೇಳೆ ತಮ್ಮನ್ನು ಪ್ರಶ್ನಿಸಿದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ಸೋಮವಾರ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
ಇಂದು ಸಾರ್ವಜನಿಕರೊಂದಿಗೆ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದರು. ಈ ಸಂದರ್ಭದಲ್ಲಿ ಸಿಟ್ಟಿಗೆದ್ದ ಸಿದ್ದರಾಮಯ್ಯ ಅವರು ಮಹಿಳೆಯ ಬಳಿಯಿದ್ದ ಮೈಕ್​ ಕಿತ್ತುಕೊಂಡು, ಆವಾಜ್ ಹಾಕಿದ್ದರು. ಘಟನೆಯ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಪೊಲೀಸರಿಗೆ ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯೂ)ದ ಅಧ್ಯಕ್ಷೆ ರೇಖಾ ಶರ್ಮಾ ಅವರು ಪತ್ರ ಬರೆದಿದ್ದಾರೆ.
ಇಂದು ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ‌ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ‌ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ‌ ನಾನು ಬಲ್ಲ‌ ಆ‌‌ ಕಾರ್ಯಕರ್ತೆ ನನ್ನ‌ಸಹೋದರಿ ಸಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು