ರಾಹುಲ್ ಗಾಂಧಿ 
ದೇಶ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯದ ಭದ್ರತೆ- ರಾಹುಲ್

ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು  ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಆಡಳಿತಾ ಬಿಜೆಪಿ ಪಕ್ಷ  ಭಾರತೀಯರನ್ನು ಇಬ್ಬಾಗಿಸಿದ್ದು, ರಾಫೆಲ್ ಹಗರಣ, ಅನಿಲ್ ಅಂಬಾನಿ, ನಿರಾವ್ ಮೋದಿ, ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಒಂದು ಕಡೆ ಇದ್ದರೆ  ಇತರ ಬಡ ರೈತರು ಮತ್ತೊಂದು ಕಡೆಯಲ್ಲಿ ಇದ್ದಾರೆ ಎಂದು ಆರೋಪಿಸಿದರು.

15 ವರ್ಷದ ನಂತರ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನೆರವಾದ ರೈತರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಚಾರಿತ್ರಿಕ ನಿರ್ಧಾರ ಕೈಗೊಳ್ಳಲಿದೆ. ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯ  ಒದಗಿಸಲಾಗುವುದು, ಇದರಿಂದಾಗಿ ದೇಶದಲ್ಲಿನ ಬಡ ಜನರು ಹಸಿವು ಮುಕ್ತರಾಗಲಿದ್ದಾರೆ ಎಂದರು.

ಸಾವಿರಾರು ಸಹೋದರ, ಸಹೋದರಿಯರು ಬಡತನದ ಬೇಗೆಯಿಂದ ಹೊರಬಾರದ ಹೊರತು ನವ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 
ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ  ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ  ಒದಗಿಸಲಾಗುವುದು. ಇದು ಕಾಂಗ್ರೆಸ್ ಪಕ್ಷದ ಭರವಸೆ  ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT