ರಾಹುಲ್ ಗಾಂಧಿ 
ದೇಶ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯದ ಭದ್ರತೆ- ರಾಹುಲ್

ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು  ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಆಡಳಿತಾ ಬಿಜೆಪಿ ಪಕ್ಷ  ಭಾರತೀಯರನ್ನು ಇಬ್ಬಾಗಿಸಿದ್ದು, ರಾಫೆಲ್ ಹಗರಣ, ಅನಿಲ್ ಅಂಬಾನಿ, ನಿರಾವ್ ಮೋದಿ, ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಒಂದು ಕಡೆ ಇದ್ದರೆ  ಇತರ ಬಡ ರೈತರು ಮತ್ತೊಂದು ಕಡೆಯಲ್ಲಿ ಇದ್ದಾರೆ ಎಂದು ಆರೋಪಿಸಿದರು.

15 ವರ್ಷದ ನಂತರ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನೆರವಾದ ರೈತರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಚಾರಿತ್ರಿಕ ನಿರ್ಧಾರ ಕೈಗೊಳ್ಳಲಿದೆ. ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯ  ಒದಗಿಸಲಾಗುವುದು, ಇದರಿಂದಾಗಿ ದೇಶದಲ್ಲಿನ ಬಡ ಜನರು ಹಸಿವು ಮುಕ್ತರಾಗಲಿದ್ದಾರೆ ಎಂದರು.

ಸಾವಿರಾರು ಸಹೋದರ, ಸಹೋದರಿಯರು ಬಡತನದ ಬೇಗೆಯಿಂದ ಹೊರಬಾರದ ಹೊರತು ನವ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 
ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ  ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ  ಒದಗಿಸಲಾಗುವುದು. ಇದು ಕಾಂಗ್ರೆಸ್ ಪಕ್ಷದ ಭರವಸೆ  ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT