ಲೋಕಪಾಲ್, ಲೋಕಾಯುಕ್ತಕ್ಕಾಗಿ ಮತ್ತೆ ಅಣ್ಣಾ ಹಜಾರೆ ನಿರಶನ 
ದೇಶ

ಲೋಕಪಾಲ್, ಲೋಕಾಯುಕ್ತಕ್ಕಾಗಿ ಅಣ್ಣಾ ಹಜಾರೆ ಮತ್ತೆ ನಿರಶನ ಪ್ರಾರಂಭ

ಲೋಕಪಾಲ್ ಮಸೂದೆ ಜಾರಿ, ಪ್ರಬಲ ಲೋಕಾಯುಕ್ತಕ್ಕಾಗಿ ದಶಕದಿಂದ ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆ, ಈಗ ಮತ್ತೊಮ್ಮೆ ನಿರಶನ ಕೈಗೊಂಡಿದ್ದಾರೆ.

ರಾಲೇಗಣ್ ಸಿದ್ದಿ: ಲೋಕಪಾಲ್ ಮಸೂದೆ ಜಾರಿ, ಪ್ರಬಲ ಲೋಕಾಯುಕ್ತಕ್ಕಾಗಿ ದಶಕದಿಂದ ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆ, ಈಗ ಮತ್ತೊಮ್ಮೆ ನಿರಶನ ಕೈಗೊಂಡಿದ್ದಾರೆ. 
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಲೋಕಪಾಲ್, ಲೋಕಾಯುಕ್ತ ನೇಮಕ ಮಾಡುವುದಕ್ಕೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಒತ್ತಡ ಹೇರಲು ಅಣ್ಣಾ ಹಜಾರೆ ಮತ್ತೊಮ್ಮೆ ಉಪವಾಸ ಪ್ರತಿಭಟನೆ ಆರಂಭಿಸಿದ್ದಾರೆ. 
ಜ.30 ರಂದು ಅವರು ಇರುವ ಗ್ರಾಮ ರಾಲೇಗಣ್ ಸಿದ್ದಿಯಲ್ಲಿ ನಿರಶನ ಕೈಗೊಂಡು ಮಾತನಾಡಿರುವ ಅಣ್ಣಾ ಹಜಾರೆ, ಲೋಕಪಾಲ್ ಮೂಲಕ ಪ್ರಧಾನಿ ವಿರುದ್ಧ ದೂರು ಬಂದು ಸಾಕ್ಷ್ಯ ಲಭ್ಯವಾದ  ರೆ ಅದನ್ನು ತನಿಖೆ ನಡೆಸುವ ಅಧಿಕಾರವಿರುತ್ತದೆ. ಲೋಕಾಯುಕ್ತದಲ್ಲಿ ಮುಖ್ಯಮಂತ್ರಿಗಳು ಹಾಗೂ ಶಾಸಕರ ವಿರುದ್ಧ ಆರೋಪ ಕೇಳಿಬಂದು ಸಾಕ್ಷ್ಯ ಲಭ್ಯವಾದರೆ ಅವರ ವಿರುದ್ಧವೂ ತನಿಖೆ ನಡೆಸುವ ಅಧಿಕಾರ ವಿರುತ್ತದೆ. ಆದ್ದರಿಂದಲೇ ಈ ಎರಡೂ ಸಂಸ್ಥೆಗಳನ್ನು ರಾಜಕಾರಣಿಗಳು ವಿರೋಧಿಸುತ್ತಿದ್ದಾರೆ. ಯಾವುದೇ ಪಕ್ಷಕ್ಕೆ ಇದು ಬೇಕಾಗಿಲ್ಲ. 2013 ರಲ್ಲೇ ಸಂಸತ್ ನಲ್ಲಿ ಲೋಕಪಾಲ್ ಮಸೂದೆ ಅಂಗೀಕರಿಸಲಾಗಿದೆ ಆದರೆ ಲೋಕಪಾಲ್ ನ್ನು ನೇಮಕ ಮಾಡಲಾಗಿಲ್ಲ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ. 
ಇನ್ನು ಹಿಂದೊಮ್ಮೆ ತಮ್ಮ ಆಂಧೋಲನದಲ್ಲಿ ಸಕ್ರಿಯರಾಗಿದ್ದ ಈಗಿನ ರಾಜಕಾರಣಿಗಳಿಗೆ ವೇದಿಕೆ ಹಂಚಿಕೊಳ್ಳಲು ಅವಕಾಶವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ಅಣ್ಣಾ ಹಜಾರೆ, ನಮಗೆ ನಮ್ಮ ವೇದಿಕೆ ಮೇಲೆ ಯಾವುದೇ ರಾಜಕಾರಣಿಗಳೂ ಬೇಕಿಲ್ಲ ಎಂದು ಹೇಳಿದ್ದಾರೆ. 
ಲೋಕಪಾಲ್ ನ್ನು ನಿರ್ಬಂಧಿಸುವುದಕ್ಕೆ ಮತ್ತೊಂದು ಕಾನೂನು ತಂದು 3 ದಿನಗಳಲ್ಲೇ ರಾಷ್ಟ್ರಪತಿ ಅಂಕಿತವನ್ನೂ ಪಡೆದರು ಆದರೆ ಲೋಕಪಾಲ್ ನ್ನು ನೇಮಕ ಮಾಡುವುದಕ್ಕೆ 5 ವರ್ಷ ಕಳೆದರೂ ಏನೂ ಮಾಡಿಲ್ಲ. ರಾಜಕಾರಣಿಗಳಿಗೆ ನಮ್ಮ ವೇದಿಕೆ ಮೇಲೆ ಪ್ರವೇಶವಿಲ್ಲ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT