ನೋಟು ನಿಷೇಧದಿಂದ ಮನೆಗಳು ಯುವಜನತೆಯ ಕೈಗೆಟುಕುವಂತಾಯಿತು: ಪ್ರಧಾನಿ ಮೋದಿ 
ದೇಶ

ನೋಟು ನಿಷೇಧದಿಂದ ಮನೆಗಳು ಯುವಜನತೆಯ ಕೈಗೆಟುಕುವಂತಾಯಿತು: ಪ್ರಧಾನಿ ಮೋದಿ

ನೋಟು ನಿಷೇಧದಿಂದ, ಯುವಜನತೆಗೆ ಮನೆಗಳು ಕೈಗೆಟುವ ದರದಲ್ಲಿ ಲಭಿಸಲು ಸಾಧ್ಯವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ನೋಟು ನಿಷೇಧದಿಂದ, ಯುವಜನತೆಗೆ ಮನೆಗಳು ಕೈಗೆಟುವ ದರದಲ್ಲಿ ಲಭಿಸಲು ಸಾಧ್ಯವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ಗುಜರಾತ್ ನ ಸೂರತ್ ನ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರ ಜಾರಿಗೆ ತಂದ ನೋಟು ನಿಷೇಧದಿಂದಾಗಿರುವ ಪ್ರಯೋಜನಗಳ ಬಗ್ಗೆ ಮಾತನಾಡಿದ್ದಾರೆ. "ನೋಟು ನಿಷೇಧದಿಂದ ಆದ ಪ್ರಯೋಜನವೇನು ಎಂದು ಕೇಳುತ್ತಾರೆ. ಇದನ್ನು ನೀವು ಯುವಜನತೆಯನ್ನು ಕೇಳಬೇಕು. ನೋಟು ನಿಷೇಧದಿಂದ ಅವರಿಗೆ ಮನೆಗಳನ್ನು ಕೈಗೆಟುಕುವ ದರದಲ್ಲಿ ಖರೀದಿಸಲು ಸಾಧ್ಯವಾಯಿತು. ನೋಟು ನಿಷೇಧಕ್ಕೂ ಮುನ್ನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಪ್ಪು ಹಣ ಇರುತ್ತಿತ್ತು. ಆದರೆ ನೋಟು ನಿಷೇಧ, ರೇರಾ ದಿಂದಾಗಿ ಅವೆಲ್ಲದಕ್ಕೂ ಕಡಿವಾಣ ಬಿತ್ತು ಎಂದು ಮೋದಿ ಹೇಳಿದ್ದಾರೆ. 
ನಮ್ಮ ಸರ್ಕಾರ ಈ ವರೆಗೂ ಮಾಡಿರುವ ಕೆಲಸಗಳನ್ನು ಮಾಡಬೇಕಾದರೆ ಬೇರೆ ಸರ್ಕಾರಗಳಿಗೆ 25 ವರ್ಷಗಳು ಬೇಕಾಗುತ್ತಿದ್ದವು ಎಂದೂ ಮೋದಿ ಹೇಳಿದ್ದಾರೆ.  ಇದೇ ವೇಳೆ ಉಡಾನ್ ಯೋಜನೆಯ ಯಶಸ್ಸಿಗಾಗಿ ಪ್ರಧಾನಿ ನರೇಂದ್ರ ಮೋದಿ ನಾಗರಿಕ ವಿಮಾನಯಾನ ಸಚಿವಾಲಯವನ್ನೂ ಅಭಿನಂದಿಸಿದ್ದು, ಕೈಗೆಟುಕುವ ದರದಲ್ಲಿ ವಿಮಾನ ಸೌಲಭ್ಯ ಕಲ್ಪಿಸುವುದು ದೇಶದ ವಿಮಾನಯಾನ ಕ್ಷೇತ್ರದ ಅಭಿವೃದ್ಧಿಗೆ ಪೂರಕ ಎಂದಿದ್ದಾರೆ.  ಯುಪಿಎ ಸರ್ಕಾರದ ಅವಧಿಯಲ್ಲಿ 25 ಲಕ್ಷ ಮನೆಗಳು ನಿರ್ಮಾಣವಾಗಿದ್ದರೆ, ತಮ್ಮ ಸರ್ಕಾರದ ಅವಧಿಯಲ್ಲಿ 1.30 ಕೋಟಿ ಮನೆಗಳು ನಿರ್ಮಾಣವಾಗಿವೆ. ಕಳೆದ 30 ವಷಗಳಿಂದ ಸಂಸತ್ ನಲ್ಲಿ ಅತಂತ್ರ ಫಲಿತಾಂಶ ಸಿಗುತ್ತಿತ್ತು. ಆದರೆ ಈಗ ಜನತೆ ಪೂರ್ಣ ಬಹುಮತ ನೀಡಿರುವುದರಿಂದ ದೇಶ ವೇಗವಾಗಿ ಅಭಿವೃದ್ಧಿಯಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT