ಸಾಂದರ್ಭಿಕ ಚಿತ್ರ 
ದೇಶ

ಜಸ್ಟ್ ಮ್ಯಾರೀಡ್ , ಜಸ್ಟ್ ಡೈವೊರ್ಸಡ್! ವಿವಾಹವಾದ ಕೆಲವೇ ನಿಮಿಷಕ್ಕೆ ವಿಚ್ಛೇದನ, ಕಾರಣ ಏನು ಗೊತ್ತಾ?

ಇತ್ತೀಚಿಗೆ ಕ್ಷುಲ್ಲಕ ಕಾರಣಕ್ಕೆ ವಿಚ್ಛೇದನ ಪಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ನವಜೋಡಿಯೊಂದು ವಿವಾಹವಾದ ಕೆಲವೇ ನಿಮಿಷಗಳಲ್ಲಿ ವಿಚ್ಛೇದನ....

ಅಹಮದಾಬಾದ್: ಇತ್ತೀಚಿಗೆ ಕ್ಷುಲ್ಲಕ ಕಾರಣಕ್ಕೆ ವಿಚ್ಛೇದನ ಪಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ನವಜೋಡಿಯೊಂದು ವಿವಾಹವಾದ ಕೆಲವೇ ನಿಮಿಷಗಳಲ್ಲಿ ವಿಚ್ಛೇದನ ಪಡೆದ ಘಟನೆ ಗುಜರಾತ್ ನ ಅಹಮದಾಬಾದ್ ಜಿಲ್ಲೆಯ ಗೊಂದಲ್ ನಲ್ಲಿ ನಡೆದಿದೆ.
ವಿವಾಹದ ಬಳಿಕ ಊಟದ ವಿಷಯವಾಗಿ ವರ ಹಾಗೂ ವಧುವಿನ ಕಡೆಯವರಿಗೆ ಭಿನ್ನಾಭಿಪ್ರಾಯ ಹುಟ್ಟಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. ಕೂಡಲೇ ಎರಡು ಕಡೆಯವರು ವಕೀಲರನ್ನು ಕರೆಯಿಸಿ, ನವ ದಂಪತಿಗೆ ವಿಚ್ಛೇದನ ಕೊಡಿಸಿದ್ದಾರೆ. 
ಮಿರರ್ ನೌ ವರದಿಯ ಪ್ರಕಾರ, ವಿವಾಹ ಮಂಟಪದಲ್ಲಿ ಏಳೇಳು ಜನ್ಮಗಳಲ್ಲೂ ಜೊತೆಯಾಗಿರುತ್ತೇನೆ ಎಂಬ ವಾಗ್ದಾನ ಮಾಡಿದ್ದ ದಂಪತಿ, ಕೇವಲ ಊಟದ ವಿಷಯಕ್ಕಾಗಿ ನಡೆದ ಗಲಾಟೆಯ ಪರಿಣಾಮ ಕೇವಲ ಅರ್ಧ ಗಂಟೆಯಲ್ಲಿಯೇ ದಾಂಪತ್ಯ ಜೀವನಕ್ಕೆ ಎಳ್ಳುನೀರು ಬಿಟ್ಟುಕೊಂಡಿದ್ದಾರೆ.
ಮದುವೆ ಮನೆಯಲ್ಲಿ ಊಟದ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ತಾರಕಕ್ಕೇರುತ್ತಿದ್ದಂತೆ, ಯಾರೋ ಒಬ್ಬರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ಮುಟ್ಟಿಸಿದ್ದಾರೆ. ಪೊಲೀಸರು ಬಂದ ಬಳಿಕ ಜಗಳವೇನೋ ತಿಳಿಯಾಗಿತ್ತು. ಆದರೆ, ಉಭಯ ಪಕ್ಷದವರಲ್ಲಿ ಅಸಮಾಧಾನದ ಹೊಗೆ ಮಾತ್ರ ಕಡಿಮೆಯಾಗಿರಲಿಲ್ಲ. ಕೂಡಲೇ ವಕೀಲರನ್ನು ಕರೆಯಿಸಿ ವಿಚ್ಛೆದನ ಪಡೆಯುವ ನಿರ್ಧಾರ ತೆಗೆದುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT