ಅಮಿತ್ ಶಾ 
ದೇಶ

'2ಜಿ ಹಗರಣದ ಗ್ಯಾಂಗಿಗೆ ಹೊಸ ಜಿ ಸೇರ್ಪಡೆ'; ಪ್ರಿಯಾಂಕಾ ಗಾಂಧಿ ವಿರುದ್ಧ ಅಮಿತ್ ಶಾ ಟೀಕೆ

ಕಾಂಗ್ರೆಸ್ ನ ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಸೇರ್ಪಡೆಯನ್ನು '2ಜಿ ಹಗರಣ ಗ್ಯಾಂಗಿಗೆ ಹೊಸ ಜಿ ಸೇರ್ಪಡೆ' ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ...

ಕೋಲ್ಕತ್ತಾ: ಕಾಂಗ್ರೆಸ್ ನ ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಸೇರ್ಪಡೆಯನ್ನು '2ಜಿ ಹಗರಣ ಗ್ಯಾಂಗಿಗೆ ಹೊಸ ಜಿ ಸೇರ್ಪಡೆ' ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದ ಮೇದಿನೀಪುರ ಜಿಲ್ಲೆಯ ಪುರ್ಬಾದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ನಿನ್ನೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯ ಹೆಸರಿನಲ್ಲಿ ಗಾಂಧಿಯ ಮೊದಲು ಇರುವ ಜಿ ಅಕ್ಷರವನ್ನು ಹಿಡಿದು ಮೂದಲಿಸಿದರು. ಯುಪಿಎ ಅಧಿಕಾರಾವಧಿಯಲ್ಲಿ 12 ಲಕ್ಷ ಕೋಟಿ ರೂಪಾಯಿಗಳ 2ಜಿ ಹಗರಣ ನಡೆದಿದೆ. ಅದಕ್ಕೆ ಇದೀಗ ಮತ್ತೊಂದು ಜಿ ಸೇರ್ಪಡೆಯಾಗಿದೆ. ಅವರ ಹೆಸರು ಪ್ರಿಯಾಂಕಾ ಗಾಂಧಿ. ಅವರು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಯಾವ ಮಟ್ಟದಲ್ಲಿ ಇರಬಹುದು ಎಂದು ಊಹಿಸಿ ಎಂದು ನೆರೆದಿದ್ದ ಜನಸಮೂಹಕ್ಕೆ ಹೇಳಿದರು.

ಭಾರತದ ಬೇರೆ ಭಾಗಗಳ ಜನತೆ ಪ್ರಧಾನಿ ಮೋದಿಯವರಿಗೆ ಮತ ಹಾಕಿ ಅವರನ್ನು ಅಧಿಕಾರಕ್ಕೆ ತಂದರೆ ಪಶ್ಚಿಮ ಬಂಗಾಳದಲ್ಲಿ ಹಳೆಯ ವೈಭವ ಮತ್ತೆ ಮರುಕಳಿಸಲಿದೆ ಎಂದರು.

ಬಂಗಾಳದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ನಿಂದ ಅದನ್ನು ತಡೆಯಲು ಸಾಧ್ಯವಿಲ್ಲ. ಮತದಾರರು ಚುನಾವಣೆಯಲ್ಲಿ ಉತ್ತರ ಅದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದರು.

ಮಮತಾ ಬ್ಯಾನರ್ಜಿಯವರ ಪೈಂಟಿಂಗ್ ಕೋಟ್ಯಂತರ ರೂಪಾಯಿಗೆ ಮಾರಾಟವಾಗುತ್ತವೆ. ಚಿಟ್ ಫಂಡ್ ಆರೋಪಿಗಳು ಅದನ್ನು ಖರೀದಿಸುತ್ತಾರೆ. ಟಿಎಂಸಿಗೆ ಸೇರಿದವರು ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ, ಹಸುಗಳ ಕಳ್ಳಸಾಗಣೆ ಮಾಡುವವರು, ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು ಟಿಎಂಸಿಯ ವೋಟ್ ಬ್ಯಾಂಕ್ ಗಳಾಗಿವೆ. ಮಮತಾ ಬ್ಯಾನರ್ಜಿಯವರು ಅವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಜಾನುವಾರುಗಳ ಕಳ್ಳ ಸಾಗಣೆ, ಅಕ್ರಮ ವಲಸಿಗರ ಒಳನುಸುಳುವಿಕೆ ತಡೆಯುವುದಲ್ಲದೆ ಚಿಟ್ ಫಂಡ್ ಹಣವನ್ನು ಕೂಡ ಜನರಿಗೆ ಹಿಂತಿರುಗಿಸಲಿದೆ ಎಂದು ಅಮಿತ್ ಶಾ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT