ಕಾರ್ತಿ ಚಿದಂಬರಂ 
ದೇಶ

ಕಾರ್ತಿ ಚಿದಂಬರಂ ವಿದೇಶ ಪ್ರವಾಸಕ್ಕೆ ಸುಪ್ರೀಂ ಕೋರ್ಟ್ ಅನುಮತಿ, 10 ಕೋಟಿ ರೂ. ಠೇವಣಿ ಇಡಲು ಆದೇಶ

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ವಿದೇಶಕ್ಕೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಕಾರ್ತಿ ತಮ್ಮ ನೊಂದಣಿ ಸಹಿತವಾಗಿ....

ನವದೆಹಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ವಿದೇಶಕ್ಕೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಕಾರ್ತಿ ತಮ್ಮ ನೊಂದಣಿ ಸಹಿತವಾಗಿ  10 ಕೋಟಿ ರೂ. ಠೇವಣಿ ಇಟ್ಟ ಬಳಿಕ ನ್ಯಾಯಾಲಯ ಅವರಿಗೆ ವಿದೇಶ ಪ್ರವಾಸಕ್ಕೆ ಅವಕಾಶ ನೀಡಿದೆ.
ಐಎನ್ಎಕ್ಸ್ ಮೀಡಿಯಾ ಮತ್ತು ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾರ್ಚ್ 5, 6, 7 ಮತ್ತು 12 ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳೆದುರು ಕಾರ್ತಿ ಹಾಜರಾಗಬೇಕಾಗಿತ್ತು. ಇದಕ್ಕೆ ಪ್ರತಿಯಾಗಿ ಕಾರ್ತಿ ತಮಗೆ ವಿದೇಶ ಪ್ರವಾಸ ಕೈಗೊಳ್ಳಲು ಅನುಮತಿಸುವಂತೆ ಕೋರಿದ್ದಾರೆ. ಇದಕ್ಕೆ ಉತ್ತರಿಸಿದ ನ್ಯಾಯಾಲಯ "ನೀವು ಕಾನೂನಿನೊಡನೆ ಆಟವಾಡಬೇಡಿ, ಫೆಬ್ರವರಿ 10 ರಿಂದ 26 ರ ನಡುವೆ ನೀವು ಎಲ್ಲಿಗೆ ಹೋಗಬೇಕೆಂದಿದ್ದಿರೋ ಹೋಗಿರಿ.ಆದರೆ ನೀವು ತನಿಖೆಗೆ ಸಹಕರಿಸಬೇಕು" ಎಂದು ಖಡಕ್ ಸೂಚನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರನ್ನೊಳಗೊಂಡ ನ್ಯಾಯಪೀಠ ಈ ನಿರ್ದೇಶನ ನಿಡಿದೆ."ನಿಮ್ಮ ಕಕ್ಷಿದಾರರಿಗೆ ವಿಚಾರಣೆಗೆ ಸಹಕರಿಸಲು ಹೇಳಿರಿ. ಅವರು ಸಹಕರಿಸುತ್ತಿಲ್ಲ. ನಾವು ಬಹಳಷ್ಟು ಸಂಗತಿಗಳನ್ನು ಹೇಳಬೇಕೆಂದು ಬಯಸುತ್ತೇವೆ, ನಾವು ಅದನ್ನು ಈಗಲೇ ಹೇಳಲಾರೆವು" ನ್ಯಾಯಪೀಠ ಹೇಳಿದೆ.
ಕಾರ್ತಿ ಕೇವಲ 10 ಕೋಟಿ ರೂ ಠೇವಣಿ ಇಡುವುದಷ್ಟೇ ಅಲ್ಲದೆ ನಿಗದಿಯಾದ ಸಮಯಕ್ಕೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವುದಾಗಿ ಅರ್ಜಿಯಲ್ಲಿ ಬರೆದು ಕೊಡಬೇಕೆಂದೂ ನ್ಯಾಯಾಲಯ ಆದೇಶಿಸಿದೆ.ಕಾರ್ತಿ ಫೆಬ್ರವರಿ 10 ರಿಂದ 26 ರವರೆಗೆ ಮತ್ತು ಮಾರ್ಚ್ 23 ರಿಂದ 31 ರವರೆಗೆವಿದೇಶಕ್ಕೆ ಪ್ರಯಾಣಿಸಲು ನ್ಯಾಯಾಲಯಕ್ಕೆ ಅನುಮತಿ ಬೇಡಿದ್ದರು.
ತಮ್ಮ ಸಂಸ್ಥೆಯ ಅಡಿಯಲ್ಲಿ ಬರುವ ಟೂರ್ಸ್ ಟೆನ್ನಿಸ್ಲಿ. ವತಿಯಿಂದ ಫ್ರಾನ್ಸ್, ಸ್ಪೇನ್, ಜರ್ಮನಿ ಮತ್ತು ಯುನೈಟೆಡ್ ಕಿಂಗ್ ಡಮ್ ಗಳಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಪಂದ್ಯಗಳನ್ನಾಯೋಜಿಸುವ ಸಂಬಂಧ ಕಾರ್ತಿ ವಿದೇಶ ಪ್ರಯಣ ಕೈಗೊಳ್ಳುವವರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT