ದೇಶ

ಚುನಾವಣೆ: ಉದ್ಯೋಗ ವಂಚಿತ ಯುವಜನಾಂಗದಿಂದಲೇ ಬಿಜೆಪಿ ಸರ್ಕಾರದ ಪದಚ್ಯುತಿ ಎಂದ ಅಖಿಲೇಶ್

Nagaraja AB
ಲಖನೌ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉದ್ಯೋಗ ಇಲ್ಲದ ಯುವಕರು ನರೇಂದ್ರ ಮೋದಿ ಸರ್ಕಾರವನ್ನು ಸೋಲಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
2017-18ನೇ ಸಾಲಿನಲ್ಲಿ ನಿರುದ್ಯೋಗ ಪ್ರಮಾಣ ಶೇ.6.01ರಷ್ಟಿದ್ದು, ಇದು 45 ವರ್ಷಗಳಲ್ಲೇ ಅತಿ ಹೆಚ್ಚು ಎಂದು ರಾಷ್ಟ್ರೀಯ ಮಾದರಿ ಸಮೀಕ್ಷಾ  ಕಚೇರಿ  ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದ  ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಖಿಲೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
SCROLL FOR NEXT