ಸಾಂದರ್ಭಿಕ ಚಿತ್ರ 
ದೇಶ

ಮೋದಿ 2.0 ಸರ್ಕಾರದ ಮೊದಲ ಬಜೆಟ್ ಜನಪರವಾಗಿರುವ ನಿರೀಕ್ಷೆ

ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ನೀರಿನ ತೊಂದರೆಗಳು, ಭೂ ರಹಿತ ಕಾರ್ಮಿಕರಿಗೆ ಕ್ರಮಗಳು, ಮತ್ತು ಉದ್ಯೋಗ ಸೃಷಿಗೆ ಒತ್ತು ನೀಡುವ ಮೂಲಕ ಜನಪರದಿಂದ ಕೂಡಿರುವ ಸಾಧ್ಯತೆ ಇದೆ ಎಂದು ಎಂದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಬರುವ ಶ್ರುಕವಾರ ಮಂಡಿಸಲಿರುವ ನರೇಂದ್ರ ಮೋದಿ  2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ನೀರಿನ ತೊಂದರೆಗಳು, ಭೂ ರಹಿತ ಕಾರ್ಮಿಕರಿಗೆ ಕ್ರಮಗಳು, ಮತ್ತು ಉದ್ಯೋಗ ಸೃಷಿಗೆ ಒತ್ತು ನೀಡುವ ಮೂಲಕ ಜನಪರದಿಂದ ಕೂಡಿರುವ ಸಾಧ್ಯತೆ ಇದೆ ಎಂದು ಎಂದು ಮೂಲಗಳಿಂದ ತಿಳಿದುಬಂದಿದೆ.
ಮುಂದಿನ ಆರೇಳು ತಿಂಗಳುಗಳಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ರಾಜಕೀಯವಾಗಿ ನಿರ್ಣಾಯಕ ವಿಷಯಗಳಿಗೆ ಸಂಬಂಧಿಸಿದ ಕ್ರಮಗಳಲ್ಲದೆ, ಧನ್ಯವಾದಪೂರ್ವಕವಾಗಿ ಬಜೆಟ್ ಮಂಡಿಸಬಹುದು ಎನ್ನಲಾಗುತ್ತಿದೆ. 
ಮಧ್ಯಂತರ ಬಜೆಟ್‌ನಲ್ಲಿ ಮಧ್ಯಮ ವರ್ಗದವರು ನೀಡಲಾದ ಪರಿಹಾರವನ್ನು ಶೂನ್ಯ ತೆರಿಗೆ ಸ್ಲ್ಯಾಬ್‌ನೊಂದಿಗೆ 5 ಲಕ್ಷ ರೂ.ಗೆ ಏರಿಸಬಹುದು ಎಂದು ನಿರೀಕ್ಷಿಸಬಹುದಾಗಿದೆ ಎಂದು ಹಿರಿಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.ಆರ್ಥಿಕ ಅಭಿವೃದ್ಧಿ ಬಗ್ಗೆ ಐದು ವರ್ಷಗಳ  ಯೋಜನೆ ರೂಪಿಸಲಿದ್ದು, ಮೂರು ರಾಜಕೀಯ ವಿಷಯಗಳಿಗೆ ಒತ್ತು ನೀಡುವ ಸಾಧ್ಯತೆ ಹೆಚ್ಚಾಗಿದೆ.  
ಕೃಷಿ ಕಾರ್ಮಿಕರು ಸೇರಿದಂತೆ ಭೂ ರಹಿತ ಕಾರ್ಮಿಕರಿಗೆ ಪ್ರಧಾನಮಂತ್ರಿ ಕಿಸಾನ್ ಯೋಜನೆ ವಿಸ್ತರಿಸುವ ಗುರಿ ಹೊಂದಲಾಗಿದೆ. ಬೆಂಬಲ ಬೆಲೆಯನ್ನು ವಾರ್ಷಿಕ ಆರು ಸಾವಿರ ರೂಪಾಯಿಗೆ ಘೋಷಿಸುವ ಸಾಧ್ಯತೆ ಇದೆ.ನೀರಾವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ. 
ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದ್ದು, ಅಂತರ್ಜಲ ವೃದ್ಧಿ ಹಾಗೂ  ಬರ ತಗ್ಗಿಸುವ ನಿಟ್ಟಿಸುವ ಜಲಮೂಲಗಳನ್ನು ಪುನಶ್ಚೇತನಗಳಿಸಲು ಸ್ವಚ್ಛ ಭಾರತ ಕಾರ್ಯಕ್ರಮದ ಯಶಸ್ಸುನ್ನು  ಪುನರಾವರ್ತಿಸಲು ಮೋದಿ ಉತ್ತುಕರಾಗಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. 
ನೀರಿನ ತೊಂದರೆಯನ್ನು ನಿವಾರಿಸಲು ಹಣಕಾಸು ಹಂಚಿಕೆ ಮಾಡಲಿದ್ದು, ರಾಜ್ಯಗಳ ಆದ್ಯತೆಗಳೊಂದಿಗೆ ಕೇಂದ್ರಸರ್ಕಾರ ನಾಯಕತ್ವದ ಪಾತ್ರ ವಹಿಸಿಕೊಳ್ಳಲಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT