ಬಿಪ್ಲಬ್ ಕುಮಾರ್ ದೇಬ್ 
ದೇಶ

ಅಪ್ರಾಮಾಣಿಕ ನೌಕರರಿಗೆ ಕಡ್ಡಾಯ ನಿವೃತ್ತಿ: ತ್ರಿಪುರ ಸಿಎಂ ಎಚ್ಚರಿಕೆ

ಸರಿಯಾಗಿ ಕಾರ್ಯನಿರ್ವಹಿಸದ ಅಪ್ರಾಮಾಣಿಕ, ಅಸಮರ್ಥ ಹಾಗೂ ಕರ್ತವ್ಯಲೋಪ ಎಸಗುವ ಸರ್ಕಾರಿ ನೌಕರರಿಗೆ ಕಡ್ಡಾಯ ನಿವೃತ್ತಿ ನೀಡಲಾಗುವುದು....

ನವದೆಹಲಿ: ಸರಿಯಾಗಿ ಕಾರ್ಯನಿರ್ವಹಿಸದ ಅಪ್ರಾಮಾಣಿಕ, ಅಸಮರ್ಥ ಹಾಗೂ ಕರ್ತವ್ಯಲೋಪ ಎಸಗುವ ಸರ್ಕಾರಿ ನೌಕರರಿಗೆ ಕಡ್ಡಾಯ ನಿವೃತ್ತಿ ನೀಡಲಾಗುವುದು ಎಂದು ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಇಂದು ಬಿಜೆಪಿ ಪರ ಸರ್ಕಾರಿ ನೌಕರರ ಸಂಘಟನೆ ತ್ರಿಪುರ ರಾಜ್ಯ ಕರ್ಮಚಾರಿ ಸಂಘದ ಎರಡನೇ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ತ್ರಿಪುರಾ ಸಿಎಂ, ಬಿಜೆಪಿ  ಸರ್ಕಾರದಲ್ಲಿ ರಾಜ್ಯ ಸರ್ಕಾರಿ ನೌಕರರು ಅತಿ ಹೆಚ್ಚು ವೇತನ ಪಡೆಯುತ್ತಿದ್ದಾರೆ. ಆದರೂ ನೌಕರರು ಪ್ರಾಮಾಣಿಕವಾಗಿ ಸಮರ್ಥವಾಗಿ ಕೆಲಸ ಮಾಡದಿರುವುದು ಕಂಡುಬಂದರೆ ಅವರಿಗೆ ಕಡ್ಡಾಯ ನಿವೃತ್ತಿ ನೀಡಲಾಗುವುದು ಎಂದರು.
ನಾನು ಕೆಲಸವನ್ನು ಪೂಜಿಸುತ್ತೇನೆ ಮತ್ತು ಗಂಭೀರವಾಗಿ ಪರಿಗಣಿಸುತ್ತೇನೆ. ಎಲ್ಲರೂ ಸರಿಯಾಗಿ ಕಾರ್ಯ ನಿರ್ವಹಿಸಬೇಕೆಂದು ನಾನು ಬಯಸುತ್ತೇನೆ. ನೀವು ಸರ್ಕಾರಿ ಕೆಲಸ ಮಾಡಲು ಬಯಸಿದರೆ ಅದನ್ನು ಸರಿಯಾಗಿ ಮಾಡಿ. ಸಾವಿರಾರು ಯುವಕರು ನಿರುದ್ಯೋಗಿಗಳಾಗಿದ್ದಾರೆ. ಆದ್ದರಿಂದ, ನಿಮಗೆ ಕೆಲಸ ಮಾಡಲು ಆಗದಿದ್ದರೆ ಕೆಲಸವನ್ನು ಬಿಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಲಿದ್ದಾರೆ ಮತ್ತು ಅದರ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT