ಬಿಪ್ಲಬ್ ಕುಮಾರ್ ದೇಬ್ 
ದೇಶ

ಅಪ್ರಾಮಾಣಿಕ ನೌಕರರಿಗೆ ಕಡ್ಡಾಯ ನಿವೃತ್ತಿ: ತ್ರಿಪುರ ಸಿಎಂ ಎಚ್ಚರಿಕೆ

ಸರಿಯಾಗಿ ಕಾರ್ಯನಿರ್ವಹಿಸದ ಅಪ್ರಾಮಾಣಿಕ, ಅಸಮರ್ಥ ಹಾಗೂ ಕರ್ತವ್ಯಲೋಪ ಎಸಗುವ ಸರ್ಕಾರಿ ನೌಕರರಿಗೆ ಕಡ್ಡಾಯ ನಿವೃತ್ತಿ ನೀಡಲಾಗುವುದು....

ನವದೆಹಲಿ: ಸರಿಯಾಗಿ ಕಾರ್ಯನಿರ್ವಹಿಸದ ಅಪ್ರಾಮಾಣಿಕ, ಅಸಮರ್ಥ ಹಾಗೂ ಕರ್ತವ್ಯಲೋಪ ಎಸಗುವ ಸರ್ಕಾರಿ ನೌಕರರಿಗೆ ಕಡ್ಡಾಯ ನಿವೃತ್ತಿ ನೀಡಲಾಗುವುದು ಎಂದು ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಇಂದು ಬಿಜೆಪಿ ಪರ ಸರ್ಕಾರಿ ನೌಕರರ ಸಂಘಟನೆ ತ್ರಿಪುರ ರಾಜ್ಯ ಕರ್ಮಚಾರಿ ಸಂಘದ ಎರಡನೇ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ತ್ರಿಪುರಾ ಸಿಎಂ, ಬಿಜೆಪಿ  ಸರ್ಕಾರದಲ್ಲಿ ರಾಜ್ಯ ಸರ್ಕಾರಿ ನೌಕರರು ಅತಿ ಹೆಚ್ಚು ವೇತನ ಪಡೆಯುತ್ತಿದ್ದಾರೆ. ಆದರೂ ನೌಕರರು ಪ್ರಾಮಾಣಿಕವಾಗಿ ಸಮರ್ಥವಾಗಿ ಕೆಲಸ ಮಾಡದಿರುವುದು ಕಂಡುಬಂದರೆ ಅವರಿಗೆ ಕಡ್ಡಾಯ ನಿವೃತ್ತಿ ನೀಡಲಾಗುವುದು ಎಂದರು.
ನಾನು ಕೆಲಸವನ್ನು ಪೂಜಿಸುತ್ತೇನೆ ಮತ್ತು ಗಂಭೀರವಾಗಿ ಪರಿಗಣಿಸುತ್ತೇನೆ. ಎಲ್ಲರೂ ಸರಿಯಾಗಿ ಕಾರ್ಯ ನಿರ್ವಹಿಸಬೇಕೆಂದು ನಾನು ಬಯಸುತ್ತೇನೆ. ನೀವು ಸರ್ಕಾರಿ ಕೆಲಸ ಮಾಡಲು ಬಯಸಿದರೆ ಅದನ್ನು ಸರಿಯಾಗಿ ಮಾಡಿ. ಸಾವಿರಾರು ಯುವಕರು ನಿರುದ್ಯೋಗಿಗಳಾಗಿದ್ದಾರೆ. ಆದ್ದರಿಂದ, ನಿಮಗೆ ಕೆಲಸ ಮಾಡಲು ಆಗದಿದ್ದರೆ ಕೆಲಸವನ್ನು ಬಿಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಲಿದ್ದಾರೆ ಮತ್ತು ಅದರ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT