ಸಾಂದರ್ಭಿಕ ಚಿತ್ರ 
ದೇಶ

11 ವರ್ಷದ ಬಾಲಕಿ ಮೇಲೆ ಅತ್ಯಾಚಾರ: 'ಸಾವಿರ ಸೋದರಿಯರ ಅಣ್ಣ' ನ ಬಂಧನ

11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಧ್ಯ ಪ್ರದೇಶದ ಸ್ವಯಂ ಘೋಷಿತ 'ಸಾವಿರ ಸಹೋದರಿಯರ ಸಹೋದರ'....

ಭೋಪಾಲ್: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಧ್ಯ ಪ್ರದೇಶದ ಸ್ವಯಂ ಘೋಷಿತ 'ಸಾವಿರ ಸಹೋದರಿಯರ ಸಹೋದರ' ಹಾಗೂ ಪಕ್ಷೇತರ ಕಾರ್ಪೋರೇಟರ್ ರಾಜೇಂದ್ರ ಸಿಂಗ್ ಅಲಿಯಾಸ್ ಕೆಂದು ಬಾಬ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಧ್ಯ ಪ್ರದೇಶದ ಬೇತುಲದಲ್ಲಿ ಈ ಘಟನೆ ನಡೆದಿದ್ದು, ಅನಾಮಿಕನೊಬ್ಬ ಪೊಲೀಸರಿಗೆ ಬರೆದ ಪತ್ರದಿಂದ ಈ ಕಾಮುಕ ಕಾರ್ಪೋರೇಟರ್ ನ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ರಾಜೇಂದ್ರ ಸಿಂಗ್, ಪ್ರತಿವರ್ಷ ರಕ್ಷಾಬಂಧನವನ್ನು ಭರ್ಜರಿಯಾಗಿ ಆಚರಿಸುತ್ತಿದ್ದ. ತನ್ನನ್ನು ತಾನು ಸಾವಿರ ಸಹೋದರಿಯರ ಸಹೋದರ ಎಂದು ಕರೆದುಕೊಳ್ಳುತ್ತಿದ್ದ. ಪತ್ರದಲ್ಲಿ ಆತನ ಬಗ್ಗೆ ಗಂಭೀರ ಆರೋಪಗಳಿವೆ ಎಂದು ಬೇತುಲಗಂಜ್ ಪೊಲೀಸ್ ಠಾಣಾಧಿಕಾರಿ ಮೋತಿಲಾಲ್ ಕುಶ್ವಾಹ ಅವರು ತಿಳಿಸಿದ್ದಾರೆ.
ಅನಾಮಿಕ ಪತ್ರದಲ್ಲಿನ ಆರೋಪಗಳನ್ನು ಗಂಭೀರವಾಗಿ ಪರಿಣಿಸಿ ನಾವು ತನಿಖೆ ಆರಂಭಿಸಿದೆವು. ಸಂತ್ರಸ್ಥ ಬಾಲಕಿಯೊಂದಿಗೆ ನಾವು ಮಾತನಾಡಿದಾಗ, ರಾಜೇಂದ್ರ ಸಿಂಗ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದನ್ನು ಖಚಿತಪಡಿಸಿದ್ದಾರೆ. ಅಲ್ಲದೆ ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿರುವುದಾಗಿ ಕುಶ್ವಾಹ ಅವರು ಹೇಳಿದ್ದಾರೆ.
ಬಾಲಕಿಯ ಕುಟುಂಬಕ್ಕೆ ಬೆದರಿಕೆ ಇರುವುದರಿಂದ ಸೂಕ್ತ ಭದ್ರತೆ ನೀಡುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. 
ಝಾಕೀರ್ ಹುಸೇನ್ ವಾರ್ಡ್ ಕಾರ್ಪೋರೇಟ್ ಆಗಿರುವ ಆರೋಪಿ ಬರೋಬ್ಬರಿ ಒಂದು ವರ್ಷದಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಕೃತ್ಯದ ಬಗ್ಗೆ ಯಾರಲ್ಲಿಯಾದರೂ ಬಾಯ್ಬಿಟ್ಟರೆ ಪರಿಣಾಮ ಬಹಳ ಕೆಟ್ಟದಾಗಿರುತ್ತದೆ ಎಂದು ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT