ತೇಜಸ್ ವಿಮಾನದಿಂದ ಕಳಚಿ ಬಿತ್ತು 1200 ಲೀ ಇಂಧನ ಟ್ಯಾಂಕ್! 
ದೇಶ

ತಮಿಳುನಾಡು: ತೇಜಸ್ ವಿಮಾನದಿಂದ ಕಳಚಿ ಬಿತ್ತು 1200 ಲೀ ಇಂಧನ ಟ್ಯಾಂಕ್!

ಆಗಸದಲ್ಲಿ ಚಲಿಸುತ್ತಿದ್ದ ತೇಜಸ್ ವಿಮಾನದ ಇಂಧನ ಟ್ಯಾಂಕ್ ಇದ್ದಕ್ಕಿದ್ದಂತೆ ಕಳಚಿ ಕೃಷಿ ಭೂಮಿಯಲ್ಲಿ ಬಿದ್ದಿರುವ ಘಟನೆ ತಮಿಳುನಾಡಿನ ಕೊಯಮತ್ತುರಿನಲ್ಲಿ ನಡೆದಿದೆ.

ಕೊಯಮತ್ತೂರ್(ತಮಿಳುನಾಡು): ಆಗಸದಲ್ಲಿ ಚಲಿಸುತ್ತಿದ್ದ ತೇಜಸ್ ವಿಮಾನದ ಇಂಧನ ಟ್ಯಾಂಕ್ ಇದ್ದಕ್ಕಿದ್ದಂತೆ ಕಳಚಿ ಕೃಷಿ ಭೂಮಿಯಲ್ಲಿ ಬಿದ್ದಿರುವ ಘಟನೆ ತಮಿಳುನಾಡಿನ ಕೊಯಮತ್ತುರಿನಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ನಗರದ ಹೊರವಲಯದಲ್ಲಿರುವ ಕೃಷಿ  ಜಮೀನಿನಲ್ಲಿ ಇಂಧನ ಟ್ಯಾಂಕ್ ನಿದ್ದಿದ್ದಾಗಿ ಪೋಲೀಸರು ಹೇಳಿದ್ದಾರೆ.
ಘಟನೆಯಲ್ಲಿ ವಿಮಾನದಲ್ಲಿರುವವರಿಗೆ ಅಥವಾ ಸ್ಥಳೀಯರಿಗೆ ಯಾವ ಗಾಯವಾಗಿಲ್ಲ ಎಂದು ಚೆನ್ನೈನ ರಕ್ಷಣಾ ಮೂಲಗಳು ಸ್ಪಷ್ಟಪಡಿಸಿದೆ.
ಆಕಾಶದಿಂದ ಇದ್ದಕ್ಕಿದ್ದ ಹಾಗೆ 1200 ಲೀಟರ್ ಪೆಟ್ರೋಲ್ ಟ್ಯಾಂಕ್ ಬೀಳುತ್ತಿರುವುದನ್ನು ನೋಡಿ ಇಡುಗೂರ್ ಗ್ರಾಮದಲ್ಲಿನ ಕೃಷಿ ಕಾರ್ಮಿಕರು ಆಘಾತಕ್ಕೊಳಗಾಗಿದ್ದರು. ಇನ್ನು ಅಷ್ಟು ಎತ್ತರದಿಂದ ಟ್ಯಾಂಕ್ ಬಿದ್ದ ಕಾರಣ ನೆಲದಲ್ಲಿ ಮೂರಡಿ ಆಳದ ಕುಳಿ ಉಂಟಾಗಿದೆಯಲ್ಲದೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಅದಾಗ್ಯೂ ತೇಜಸ್ ಯುದ್ಧ ವಿಮಾನವು ಸಮೀಪದ ಸೂಳೂರ್ ವಾಯುನೆಲೆಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.ಅಪಘಾತಕ್ಕೆ ಕಾರಣವನ್ನು ಇನ್ನಷ್ಟೇ ಪತ್ತೆ ಮಾಡಬೇಕಿದೆ ಎಂದು ಐಎಎಫ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT