ತೇಜಸ್ ವಿಮಾನದಿಂದ ಕಳಚಿ ಬಿತ್ತು 1200 ಲೀ ಇಂಧನ ಟ್ಯಾಂಕ್! 
ದೇಶ

ತಮಿಳುನಾಡು: ತೇಜಸ್ ವಿಮಾನದಿಂದ ಕಳಚಿ ಬಿತ್ತು 1200 ಲೀ ಇಂಧನ ಟ್ಯಾಂಕ್!

ಆಗಸದಲ್ಲಿ ಚಲಿಸುತ್ತಿದ್ದ ತೇಜಸ್ ವಿಮಾನದ ಇಂಧನ ಟ್ಯಾಂಕ್ ಇದ್ದಕ್ಕಿದ್ದಂತೆ ಕಳಚಿ ಕೃಷಿ ಭೂಮಿಯಲ್ಲಿ ಬಿದ್ದಿರುವ ಘಟನೆ ತಮಿಳುನಾಡಿನ ಕೊಯಮತ್ತುರಿನಲ್ಲಿ ನಡೆದಿದೆ.

ಕೊಯಮತ್ತೂರ್(ತಮಿಳುನಾಡು): ಆಗಸದಲ್ಲಿ ಚಲಿಸುತ್ತಿದ್ದ ತೇಜಸ್ ವಿಮಾನದ ಇಂಧನ ಟ್ಯಾಂಕ್ ಇದ್ದಕ್ಕಿದ್ದಂತೆ ಕಳಚಿ ಕೃಷಿ ಭೂಮಿಯಲ್ಲಿ ಬಿದ್ದಿರುವ ಘಟನೆ ತಮಿಳುನಾಡಿನ ಕೊಯಮತ್ತುರಿನಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ನಗರದ ಹೊರವಲಯದಲ್ಲಿರುವ ಕೃಷಿ  ಜಮೀನಿನಲ್ಲಿ ಇಂಧನ ಟ್ಯಾಂಕ್ ನಿದ್ದಿದ್ದಾಗಿ ಪೋಲೀಸರು ಹೇಳಿದ್ದಾರೆ.
ಘಟನೆಯಲ್ಲಿ ವಿಮಾನದಲ್ಲಿರುವವರಿಗೆ ಅಥವಾ ಸ್ಥಳೀಯರಿಗೆ ಯಾವ ಗಾಯವಾಗಿಲ್ಲ ಎಂದು ಚೆನ್ನೈನ ರಕ್ಷಣಾ ಮೂಲಗಳು ಸ್ಪಷ್ಟಪಡಿಸಿದೆ.
ಆಕಾಶದಿಂದ ಇದ್ದಕ್ಕಿದ್ದ ಹಾಗೆ 1200 ಲೀಟರ್ ಪೆಟ್ರೋಲ್ ಟ್ಯಾಂಕ್ ಬೀಳುತ್ತಿರುವುದನ್ನು ನೋಡಿ ಇಡುಗೂರ್ ಗ್ರಾಮದಲ್ಲಿನ ಕೃಷಿ ಕಾರ್ಮಿಕರು ಆಘಾತಕ್ಕೊಳಗಾಗಿದ್ದರು. ಇನ್ನು ಅಷ್ಟು ಎತ್ತರದಿಂದ ಟ್ಯಾಂಕ್ ಬಿದ್ದ ಕಾರಣ ನೆಲದಲ್ಲಿ ಮೂರಡಿ ಆಳದ ಕುಳಿ ಉಂಟಾಗಿದೆಯಲ್ಲದೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಅದಾಗ್ಯೂ ತೇಜಸ್ ಯುದ್ಧ ವಿಮಾನವು ಸಮೀಪದ ಸೂಳೂರ್ ವಾಯುನೆಲೆಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.ಅಪಘಾತಕ್ಕೆ ಕಾರಣವನ್ನು ಇನ್ನಷ್ಟೇ ಪತ್ತೆ ಮಾಡಬೇಕಿದೆ ಎಂದು ಐಎಎಫ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT