ಹುಬ್ಬಳ್ಳಿ ವಿಮಾನ ನಿಲ್ದಾಣ 
ದೇಶ

ತಿರುಪತಿ ವಿಮಾನ ನಿಲ್ದಾಣಕ್ಕೆ ಸೌರ ಶಕ್ತಿ, ಶೀಘ್ರದಲ್ಲೇ ಸೋಲಾರ್‌ಮಯವಾಗಲಿದೆ ಹುಬ್ಬಳ್ಳಿ ವಿಮಾನ ನಿಲ್ದಾಣ

ದೇಗುಲ ನಗರಿ ತಿರುಪತಿ ದಕ್ಷಿಣ ಭಾರತ ಸೌರ ಶಕ್ತಿ ಚಾಲಿತ ವಿಮಾನ ನಿಲ್ದಾಣಗಳ ಗುಂಪಿಗೆ ಸೇರುವ ಮೂಲಕ ತನ್ನ ಜನಪ್ರಿಯತೆಯ ಕೀರಿಟಕ್ಕೆ...

ಹೈದರಾಬಾದ್: ದೇಗುಲ ನಗರಿ ತಿರುಪತಿ ದಕ್ಷಿಣ ಭಾರತ ಸೌರ ಶಕ್ತಿ ಚಾಲಿತ ವಿಮಾನ ನಿಲ್ದಾಣಗಳ ಗುಂಪಿಗೆ ಸೇರುವ ಮೂಲಕ  ತನ್ನ ಜನಪ್ರಿಯತೆಯ ಕೀರಿಟಕ್ಕೆ ಮತ್ತೊಂದು ಗರಿ ಮೂಡಿಸಿಕೊಂಡಿದೆ.
ಕೊಚ್ಚಿನ್, ತಿರುವನಂತಪುರ ಹಾಗೂ ವಿಜಯವಾಡ ವಿಮಾನ ನಿಲ್ದಾಣಗಳು ಪ್ರಸ್ತುತ ಸೌರ ಶಕ್ತಿ ಚಾಲಿತ ವಿಮಾನ ನಿಲ್ದಾಣಗಳಾಗಿವೆ.
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ( ಎಎಐ) ರೇಣುಗುಂಟ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಸೌರಶಕ್ತಿ ಸ್ಥಾವರವನ್ನು ಉದ್ಘಾಟಿಸಿದ್ದು, ದೇಶದ ಪ್ರಮುಖ ಸೌರ ಶಕ್ತಿ ಡೆವಲಪರ್ ಫೋರ್ತ್ ಪಾರ್ಟನರ್ ಎನರ್ಜಿಗೆ ಇದರ ಹೊಣೆ ವಹಿಸಲಾಗಿದೆ.
ಮುಂದಿನ ಮೂರು ವರ್ಷಗಳಲ್ಲಿ ತಿರುಪತಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ವಿಮಾನ ನಿಲ್ದಾಣಗಳು ಸೌರ ಶಕ್ತಿಯಿಂದ ಚಾಲಿತವಾಗಬೇಕು ಎಂದು ಎಎಇ ಪ್ರಾದೇಶಿಕ ಕಾರ್ಯಕಾರಿ ನಿರ್ದೇಶಕ ಎಸ್. ಶ್ರೀಕುಮಾರ್  ಹೇಳಿದ್ದಾರೆ.
ಹುಬ್ಬಳ್ಳಿ ಹಾಗೂ ಕಡಪ ವಿಮಾನ ನಿಲ್ದಾಣಗಳಲ್ಲಿ ಸದ್ಯದಲ್ಲೇ 8 ಮೆಗಾವಾಟ್ ಸೌರ ಶಕ್ತಿ  ಸ್ಥಾವರಗಳು ಕಾರ್ಯಾರಂಭಗೊಳ್ಳಲಿವೆ ಎಂದು ಅವರು ತಿಳಿಸಿದ್ದಾರೆ.
ತಿರುಪತಿಯಲ್ಲಿ  ನಾಲ್ಕು ಎಕರೆ ಭೂಮಿಯಲ್ಲಿ  ಸೌರ ಶಕ್ತಿ  ಸ್ಥಾವರ  ಆಳವಡಿಸಲಾಗಿದ್ದು, ವಿಮಾನ ನಿಲ್ದಾಣದ  ರನ್ ವೇ  ಸಮಾನಂತರವಾಗಿ ಇವುಗಳನ್ನು  ಅಳವಡಿಸಲಾಗಿದೆ.
ಸೌರ ಶಕ್ತಿ ಉತ್ಪಾದನೆ ಹಗಲು ವೇಳೆ ಹೆಚ್ಚಾಗಿರುವ ಕಾರಣ ವಿದ್ಯುತ್ ಅಗತ್ಯತೆತೆಯ ಶೇ. 75ರಷ್ಟು ವಿದ್ಯುತ್ ಇವು ಪೂರೈಸಲಿವೆ. ಪ್ರಸ್ತುತ ವಿಮಾನ ನಿಲ್ದಾಣ ರಾತ್ರಿ ಕಾರ್ಯಾಚರಣೆ ನಡೆಸುತ್ತಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT