ಚುನಾವಣೇಲಿ ಬಿಜೆಪಿ ಗೆ ಜಯ: ಗುಜರಾತಿನಿಂದ ದೆಹಲಿಗೆ ಸೈಕಲ್ ಮೇಲೆ ಬಂದು ಪ್ರಧಾನಿಗೆ ಶುಭಕೋರಿದ ಅಭಿಮಾನಿ! 
ದೇಶ

ಚುನಾವಣೇಲಿ ಬಿಜೆಪಿ ಗೆ ಜಯ: ಗುಜರಾತಿನಿಂದ ದೆಹಲಿಗೆ ಸೈಕಲ್ ಮೇಲೆ ಬಂದು ಪ್ರಧಾನಿಗೆ ಶುಭಕೋರಿದ ಅಭಿಮಾನಿ!

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನೂರಕ್ಕೆ ಹೆಚ್ಚು ಸ್ಥಾನ ಗಳಿಸಿದ್ದ ಕಾರಣ ಗುಜರಾತಿನ ಅಭಿಮಾನಿಯೊಬ್ಬ ತನ್ನ ಊರಿಂದ ದೆಹಲಿಗೆ ಸೈಕಲ್ ಮೇಲೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ....

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನೂರಕ್ಕೆ ಹೆಚ್ಚು ಸ್ಥಾನ ಗಳಿಸಿದ್ದ ಕಾರಣ ಗುಜರಾತಿನ ಅಭಿಮಾನಿಯೊಬ್ಬ  ತನ್ನ ಊರಿಂದ ದೆಹಲಿಗೆ ಸೈಕಲ್ ಮೇಲೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಅಭಿನಂದಿಸಿರುವ ಅಪರೂಪದ ಘಟನೆ ನಡೆದಿದೆ.
ಬಿಜೆಪಿ ಕಾರ್ಯಕರ್ತ ಖಿಂಚಂದ್ ಚಂದ್ರಾಣಿ ಗುಜರಾತಿನ ಅಮ್ರೆಲಿಯಿಂದ ಸೈಕಲ್ ಏರಿ ದೆಹಲಿಗೆ ಆಗಮಿಸಿದ್ದು ಪ್ರಧಾನಿಗೆ ಶುಭಾಶಯಕೋರಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300 ಕ್ಕೂ ಹೆಚ್ಚು ಸ್ಥಾನಗಳು ದೊರೆತರೆ, ನಾನು ಸೈಕಲ್‌ನಲ್ಲಿ ದೆಹಲಿಗೆ ಬರುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ ಎಂದು ಚಂದ್ರಾಣಿ ಸಂಕಲ್ಪ ಮಾಡಿದ್ದರು. ಅದರಂತೆ ಅವರಿಂದು ದೆಹಲಿಗೆ ಆಗಮಿಸಿದ್ದಾರೆ.
ಇನ್ನು ಅವರ ಸೈಕಲ್ ಪ್ರಯಾಣವು ಹಲವಾರು ಅಭಿಮಾನಿಗಳನ್ನು ಸೆಳೆದಿದ್ದು ನಮ್ರತೆ, ಉತ್ಸಾಹ ಹಲವರನ್ನು ಆಕರ್ಷಿಸಿದೆ.
"ಲೋಕಸಭೆ ಚುನಾವಣೆಯಲ್ಲಿ  ಬಿಜೆಪಿಗೆ 300 ಕ್ಕೂ ಹೆಚ್ಚು ಸ್ಥಾನಗಳು ಬಂದರೆ ಅವರನ್ನು ಅಭಿನಂದಿಸಲು ನಾನು ಸೈಕಲ್‌ನಲ್ಲಿ ದೆಹಲಿಗೆ ಬರುತ್ತೇನೆ ಎಂಬ ನಿರ್ಣಯವನ್ನು ಕೈಗೊಂಡಿದ್ದೆ, ಈ ದೂರವನ್ನು ಕ್ರಮಿಸಲು ನನಗೆ 17 ದಿನಗಳು ಬೇಕಾಯಿತು. ನಾನು ಪ್ರಧಾನ ಮಂತ್ರಿಯೊಂದಿಗೆ ಮಾತನಾಡಿದೆ, ಅವರು 'ನಿಮಗೆ ತುಂಬಾ ಧೈರ್ಯವಿದೆ' ಎಂದು ಹೇಳಿದರು. ನಾನು ನಾಳೆ ಅಥವಾ ನಾಡಿದ್ದು ಗೃಹಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದೇನೆ." ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT