ರಾಹುಲ್ ಗಾಂಧಿ 
ದೇಶ

ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕ: ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ

ಈಗಾಗಲೇ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ಬುಧವಾರ ತಮ್ಮ ರಾಜೀನಾಮೆ...

ನವದೆಹಲಿ: ಈಗಾಗಲೇ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್​ನಲ್ಲಿ ಪ್ರಕಟಿಸಿದ್ದಾರೆ.
2019 ಲೋಕಸಭೆ ಚುನಾವಣೆ ಸೋಲಿನ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಅವರು, ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕವಾಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್​ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ. 2019ರ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಬೇಕಿದೆ. ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಬೇಕಿದೆ. ಪಕ್ಷಕ್ಕೆ ಪುನಶ್ಚೇತನ ನೀಡಬೇಕಿದೆ. ಹೀಗಾಗಿ ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ ಎಂದು ರಾಹುಲ್​ ಗಾಂಧಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತಡ ಮಾಡದೆ ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಮಾಡಬೇಕು. ಈ ಆಯ್ಕೆಯ ಪ್ರಕ್ರಿಯೆಲ್ಲಿ ತಾನು ಭಾಗವಾಗಿಯೂ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ ಅವರು ನೀಡಿದ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಆದರೂ ಅವರು ತಮ್ಮ ಟ್ವಿಟ್ಟರ್ ಖಾತೆಯ ಪ್ರೋಫೈಲ್ ನಲ್ಲಿದ್ದ ಎಐಸಿಸಿ ಅಧ್ಯಕ್ಷ ಪದವನ್ನು ತೆಗೆದು, ಎಐಸಿಸಿ ಸದಸ್ಯ ಹಾಗೂ ಸಂಸದ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT