ಹತ್ಯೆಯಾದ ದಲಿತ ದಂಪತಿ 
ದೇಶ

ತಮಿಳುನಾಡು: ಶಸ್ತ್ರ ಸಜ್ಜಿತ ಗ್ಯಾಂಗ್ ನಿಂದ ದಲಿತ ದಂಪತಿಯ ಕೊಲೆ, ಮರ್ಯಾದಾ ಹತ್ಯೆ ಶಂಕೆ

ತಮಿಳುನಾಡಿನ ತೂತುಕುಡಿಯಲ್ಲಿ ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದ ಪ್ರೇಮಿಗಳಿಬ್ಬರನ್ನು ಶಸ್ತ್ರ ಸಜ್ಜಿತ ಗುಂಪೊಂದು ಕೊಲೆ ಮಾಡಿದ್ದು...

ತೂತುಕುಡಿ: ತಮಿಳುನಾಡಿನ ತೂತುಕುಡಿಯಲ್ಲಿ ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದ ಪ್ರೇಮಿಗಳಿಬ್ಬರನ್ನು ಶಸ್ತ್ರ ಸಜ್ಜಿತ ಗುಂಪೊಂದು ಕೊಲೆ ಮಾಡಿದ್ದು, ಇದೊಂದು ಮರ್ಯಾದಾ ಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ದಲಿತ ದಂಪತಿಯ ಹತ್ಯೆಯ ಹಿಂದೆ ಯುವತಿ ಸಂಬಂಧಿಗಳ ಕೈವಾಡವಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಹತ್ಯೆಯಾದ ದಂಪತಿಗಳನ್ನು ಟಿ ಸೋಲರಾಜ್ (23) ಮತ್ತು ಎಸ್ ಪೆಚ್ಚಾಮ್ಮಾಳ್ ಅಲಿಯಾಸ್ ಜ್ಯೋತಿ(20) ಎಂದು ಗುರುತಿಸಲಾಗಿದೆ. ವಿದ್ಯುತ್ ಇಲ್ಲದ ಹಿನ್ನೆಲೆಯಲ್ಲಿ ಮನೆಯ ಹೊರಗಡೆ ಮಲಗ್ಗಿದ್ದ ನವ ದಂಪತಿಗಳನ್ನು ದುಷ್ಕರ್ಮಿಗಳ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಪರಯಾರ್ ಸಮುದಾಯಕ್ಕೆ ಸೇರಿದ್ದ ಸೋಲರಾಜ್ ಪಲ್ಲಾರ್ ಹುಡುಗಿ ಪೆಚ್ಚಾಮ್ಮಾಳ್ ಅವರನ್ನು ಕಳೆದ ಏಪ್ರಿಲ್ 15ರಂದು ಮದುವೆಯಾಗಿದ್ದರು. ಇಬ್ಬರು ಪೆರಿಯಾರ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು.
ಈ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದರೂ ಪರಯಾರ್ ಗಿಂತ ಪಲ್ಲಾರ್ ಮೇಲಿನ ಜಾತಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸೋಲರಾಜ್ ಜತೆ ಮದುವೆಗೆ ಪೆಚ್ಚಾಮ್ಮಾಳ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಮೃತ ದೇಹಗಳನ್ನು ತೂತುಕುಡಿ ವೈದ್ಯಕೀಯ ಕಾಲೇಜ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೊಲತ್ತೂರ್ ಪೊಲೀಸರು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT