ಇಂದ್ರಾಣಿ ಮುಖರ್ಜಿ 
ದೇಶ

ಐಎನ್ಎಕ್ಸ್ ಪ್ರಕರಣದಲ್ಲಿ ಇಂದ್ರಾಣಿ ಮುಖರ್ಜಿ ಸಾಕ್ಷಿದಾರಳಾಗಲು ಕೋರ್ಟ್ ಅಸ್ತು

ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದರಂಬಂ ಭಾಗಿಯಾಗಿರುವ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ,

ನವದೆಹಲಿ: ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದರಂಬಂ ಭಾಗಿಯಾಗಿರುವ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ, ಐಎನ್ಎಕ್ಸ್ ಮೀಡಿಯಾ ಮಾಜಿ ನಿರ್ದೇಶಕಿ ಇಂದ್ರಾಣಿ ಮುಖರ್ಜಿ ಅವರು ಸಾಕ್ಷಿ ಹೇಳಲು(ಅಪ್ರೂವರ್) ಸಿಬಿಐ ವಿಶೇಷ ಕೋರ್ಟ್ ಗುರುವಾರ ಅನುಮತಿ ನೀಡಿದೆ.
ಇಂದ್ರಾಣಿ ಮುಖರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ನಿರ್ದೇಶಕ ಅರುಣ್ ಭಾರದ್ವಾಜ್ ಅವರು, ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಾಕ್ಷಿದಾರಗಳಾಗಲು ಅನುಮತಿ ನೀಡಿ, ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದ್ದಾರೆ.
ಪುತ್ರಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಇಂದ್ರಾಣಿ ಮುಖರ್ಜಿ ಸದ್ಯ ಬೈಕುಲಾ ಜೈಲಿನಲ್ಲಿದ್ದು, ಕಳೆದ ವರ್ಷ ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಬಳಿಕ ಸಾಕ್ಷಿದಾರಳಾಗಲು ಒಪ್ಪಿಗೆ ಕೋರಿ ಸಿಬಿಐ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಐಎನ್‌ಎಕ್ಸ್‌ ಮಾಧ್ಯಮ ಸಂಸ್ಥೆಗೆ ವಿದೇಶಿ ಹೂಡಿಕೆ ಪಡೆದುಕೊಳ್ಳಲು ಕಾನೂನುಬಾಹಿರವಾಗಿ ಅನುಮೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT