ಸಂಗ್ರಹ ಚಿತ್ರ 
ದೇಶ

ನಿರ್ಣಾಯಕ ಘಟ್ಟದಲ್ಲಿ ಕುಲಭೂಷಣ್ ಜಾದವ್ ಪ್ರಕರಣ, ಜುಲೈ 17ಕ್ಕೆ ತೀರ್ಪು!

ಭಾರತ ಮತ್ತು ಪಾಕಿಸ್ತಾನದ ನಡುವೆ ತೀವ್ರ ತಿಕ್ಕಾಟಕ್ಕೆ ಕಾರಣವಾಗಿರುವ ಕುಲಭೂಷಣ್ ಜಾದವ್ ಪ್ರಕರಣದ ತೀರ್ಪು ಇದೇ ಜುಲೈ ತಿಂಗಳ ಅಂತ್ಯದಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ತೀವ್ರ ತಿಕ್ಕಾಟಕ್ಕೆ ಕಾರಣವಾಗಿರುವ ಕುಲಭೂಷಣ್ ಜಾದವ್ ಪ್ರಕರಣದ ತೀರ್ಪು ಇದೇ ಜುಲೈ ತಿಂಗಳ 17ಕ್ಕೆ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಕುಲ್ ಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ತನ್ನ ತೀರ್ಪನ್ನು ಇದೇ ಜುಲೈ 17ಕ್ಕೆ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಗುರುವಾರ, 'ಕುಲಭೂಷಣ್ ಜಾಧವ್ ಪ್ರಕರಣವನ್ನು ಕೆಲವೇ ವಾರಗಳಲ್ಲಿ ಘೋಷಿಸಲಾಗುವುದು. ಪ್ರಕರಣದಲ್ಲಿ ಮೌಖಿಕ ಸಲ್ಲಿಕೆಗಳನ್ನು ಮಾಡಲಾಗಿದೆ. ಈ ತೀರ್ಪನ್ನು ಅಂತಾರಾಷ್ಟ್ರೀಯ ನ್ಯಾಯಾಲಯವು ಘೋಷಿಸಬೇಕಾಗಿದೆ. ದಿನಾಂಕವನ್ನು ಅವರು ನಿಗದಿಪಡಿಸಲಿದ್ದಾರೆ ಎಂದು ಹೇಳಿದರು.
ಇನ್ನು 48 ವರ್ಷದ ಮಾಜಿ ನೌಕಾ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ 2017 ರ ಏಪ್ರಿಲ್ 11 ರಂದು ಗೂಢಚರ್ಯೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು, ಈ ತೀರ್ಪನ್ನು ಪ್ರಶ್ನಿಸಿ ಭಾರತ ಅಂತಾರಾಷ್ಟ್ರೀಯ ಕೋರ್ಟ್ ಗೆ ಮೊರೆಹೋಗಿತ್ತು. ಈ ಪ್ರಕರಣದ ನಾಲ್ಕು ದಿನಗಳ ವಿಚಾರಣೆ ಫೆಬ್ರವರಿ 18 ರಂದು ಹೇಗ್‌ ನ ಐಸಿಜೆ ಕೇಂದ್ರ ಕಚೇರಿಯಲ್ಲಿ ಪ್ರಾರಂಭವಾಯಿತು.  
ಮೇ 18, 2017 ರಂದು, ಐಸಿಜೆ ಯ 10 ಸದಸ್ಯರ ಪೀಠವು ಪ್ರಕರಣವನ್ನು ತೀರ್ಪು ನೀಡುವವರೆಗೂ ಜಾಧವ್ ಅವರನ್ನು ಗಲ್ಲಿಗೇರಿಸದಂತೆ ಪಾಕಿಸ್ತಾನವನ್ನು ನಿರ್ಬಂಧಿಸಿತು. ಈ ವರ್ಷದ ಫೆಬ್ರವರಿಯಲ್ಲಿ ಜಾಧವ್ ಅವರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಪಾಕಿಸ್ತಾನ ಮಾಡಿದ ಐದು ಮನವಿಗಳನ್ನು ಐಸಿಜೆ ತಿರಸ್ಕರಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT