ಸಾಂದರ್ಭಿಕ ಚಿತ್ರ 
ದೇಶ

3 ಮಕ್ಕಳನ್ನು ಹೊಂದಿದ್ದಕ್ಕೆ ಹೈದರಾಬಾದ್ ಕಾರ್ಪೋರೇಟರ್ ನ್ನು ಅನರ್ಹಗೊಳಿಸಿದ ಕೋರ್ಟ್

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್ ಎಂಸಿ)ಯ ಕಾರ್ಪೋರೇಟರ್ ಒಬ್ಬರನ್ನು ನಾಂಪಲ್ಲಿ...

ಹೈದರಾಬಾದ್: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್ ಎಂಸಿ)ಯ ಕಾರ್ಪೋರೇಟರ್ ಒಬ್ಬರನ್ನು ನಾಂಪಲ್ಲಿ ಕೋರ್ಟ್ ಅನರ್ಹಗೊಳಿಸಿ ಗುರುವಾರ ತೀರ್ಪು ನೀಡಿದೆ.
ಜಿಎಚ್ ಎಂಸಿ ಕಾಯ್ದೆ 2009ರ ಸೆಕ್ಷನ್ 21 ಬಿ ಪ್ರಕಾರ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ.
ಟಿಆರ್ ಎಸ್ ಗೆ ಸೇರಿದ ಕಾಚೆಗುಡ ಕಾರ್ಪೋರೇಟರ್ ಎಕ್ಕಲ ಚೈತನ್ಯ ಕಣ್ಣ ಅವರು ಚುನಾವಣೆಗೆ ಸ್ಪರ್ಧಿಸುವ ವೇಳೆ ತಾವು ಕೇವಲು ಎರಡು ಮಕ್ಕಳನ್ನು ಹೊಂದಿರುವುದಾಗಿ ಅಫಿಡವಿಟ್ ಸಲ್ಲಿಸಿದ್ದರು. ಆದರೆ ಕಣ್ಣ ಅವರು ಎರಡರಲ್ಲ ಮೂರು ಮಕ್ಕಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ, ಮಾಜಿ ಕಾರ್ಪೋರೇಟರ್ ಕೆ ರಮೇಶ್ ಯಾದವ್ ಅವರು ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದರು.
ಟಿಆರ್ ಎಸ್ ಕಾರ್ಪೋರೇಟರ್ ಅವರು ಅಫಿಡವಿಟ್ ನಲ್ಲಿ ಸುಳ್ಳು ಹೇಳಿದ್ದರಿಂದ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಸುಮಾರು ಮೂರು ವರ್ಷಗಳ ವಿಚಾರಣೆ ನಡೆಸಿದ ಕೋರ್ಟ್ ಅಂತಿಮವಾಗಿ ಕಣ್ಣ ಅವರನ್ನು ಅನರ್ಹಗೊಳಿಸಿದೆ ಎಂದು ಯಾದವ್ ಅವರು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT