ಬಿಪಿನ್ ರಾವತ್ 
ದೇಶ

ಪಾಕಿಸ್ತಾನಕ್ಕೀಗ ಧೈರ್ಯವಿಲ್ಲ, ಕಾರ್ಗಿಲ್ ನಂತಹ ಪ್ರಯತ್ನ ಮತ್ತೆ ಮಾಡಲ್ಲ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

1999 ರಲ್ಲಿ ಕಾಂರ್ಗಿಲ್ ನಲ್ಲಿ ಮಾಡಿದಂತೆ ಪಾಕಿಸ್ತಾನ ಇನ್ನೊಮ್ಮೆ ಪ್ರಯತ್ನ ಮಾಡುವುದಿಲ್ಲ ಏಕೆಂದರೆ ಅದು ಸಾಕಷ್ಟು "ಪರಿಣಾಮಗಳನ್ನು" ಉಂಡಿದೆ ಎಂದು ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ

ನವದೆಹಲಿ: 1999 ರಲ್ಲಿ ಕಾಂರ್ಗಿಲ್ ನಲ್ಲಿ ಮಾಡಿದಂತೆ ಪಾಕಿಸ್ತಾನ ಇನ್ನೊಮ್ಮೆ ಪ್ರಯತ್ನ ಮಾಡುವುದಿಲ್ಲ ಏಕೆಂದರೆ ಅದು ಸಾಕಷ್ಟು "ಪರಿಣಾಮಗಳನ್ನು" ಉಂಡಿದೆ ಎಂದು ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.  ಸಶಸ್ತ್ರ ಪಡೆಗಳು ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ನಿಗಾ ವಹಿಸಿದೆ ಎಂದು ಅವರು ಪ್ರತಿಪಾದಿಸಿದರು
ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಯುದ್ಧದ 20 ವರ್ಷಗಳ ಆಪರೇಷನ್ ವಿಜಯ್ ನೆನಪಿಗಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
"ನಾವು ಯಾವುದೇ ಪ್ರದೇಶವನ್ನೂ ರಕ್ಷಿಸದೆ ಬಿಡುವುದಿಲ್ಲ.  ನಮ್ಮ ಕಣ್ಗಾವಲು ತಂಡವು ಕಟ್ಟುನಿಟ್ಟಾಗಿ ಕಾವಲು ಕಾಯುತ್ತಿವೆ. ಗಡಿಯಲ್ಲಿ ನಿಯಮಿತವಾಗಿ ಗಸ್ತು ತಿರುಗುತ್ತಿದೆ
"ಪಾಕಿಸ್ತಾನವು  ಅಂತಹದನ್ನು (ಕಾರ್ಗಿಲ್ ನಂತೆ)ಮತ್ತೆ ಯುದ್ಧಕ್ಕೆ ಮುಂದಾಗುವುದಿಲ್ಲ ಎಂದು ನಾನು ಭಾವಿಸಿದ್ದೇನೆ. ಏಕೆಂದರೆ ಅವರು ಅದರ ಪರಿಣಾಮಗಳನ್ನು ನೋಡಿದ್ದಾರೆ. ಮುಂಬರುವ ದಿನಗಳು ಮತ್ತು ವರ್ಷಗಳಲ್ಲಿ ಪಾಕಿಸ್ತಾನ ಯಾವುದೇ ಒಳನುಸುಳುವಿಕೆಯನ್ನು ಪ್ರಯತ್ನಿಸಲು ಧೈರ್ಯ ಮಾಡುವುದಿಲ್ಲ" ಎಂದು ಸೇನಾ ಮುಖ್ಯಸ್ಥರು ಸುದ್ದಿಗಾರರಿಗೆ ತಿಳಿಸಿದರು.
 ಬಾಲಿವುಡ್ ಗೀತರಚನೆಕಾರ ಸಮೀರ್ ಬರೆದ ಕಾರ್ಗಿಲ್ ವೀರರಿಗೆ ಮೀಸಲಾದ ವಿಶೇಷ ಗೌರವದ ಹಾಡಿನ ವಿಡಿಯೋವನ್ನೂ ಅವರು ಬಿಡುಗಡೆ ಮಾಡಿದರು.ವೀಡಿಯೊದಲ್ಲಿ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಇತರ ಪ್ರಸಿದ್ಧ ನಟರು ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT