ಸಾಂದರ್ಭಿಕ ಚಿತ್ರ 
ದೇಶ

50 ಸಾವಿರ ರು. ಮೇಲ್ಪಟ್ಟ ಹಣ ವರ್ಗಾವಣೆಗೆ ಆಧಾರ್ ಬಳಸಬಹುದು: ಕಂದಾಯ ಕಾರ್ಯದರ್ಶಿ

50 ಸಾವಿರ ರುಪಾಯಿಗಿಂತ ಹೆಚ್ಚು ಹಣ ವರ್ಗಾವಣೆಗೆ ಭಾರತದ ರಾಷ್ಟ್ರೀಯ ಬಯೋಮೆಟ್ರಿಕ್ ಐಡಿ ಕಾರ್ಡ್ ಆಧಾರನ್ನು ಬಳಸಬಹುದು ಮತ್ತು ಇತರೆ...

ನವದೆಹಲಿ: 50 ಸಾವಿರ ರುಪಾಯಿಗಿಂತ ಹೆಚ್ಚು ಹಣ ವರ್ಗಾವಣೆಗೆ ಭಾರತದ ರಾಷ್ಟ್ರೀಯ ಬಯೋಮೆಟ್ರಿಕ್ ಐಡಿ ಕಾರ್ಡ್ ಆಧಾರನ್ನು ಬಳಸಬಹುದು ಮತ್ತು ಇತರೆ ಉದ್ದೇಶಗಳಿಗೆ ಎಂದಿನಂತೆ ಪಾನ್ ಕಾರ್ಡ್ ಕಡ್ಡಾಯ ಎಂದು ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್ ಮತ್ತು ಇತರೆ ಸಂಸ್ಥೆಗಳಲ್ಲಿ ಆಧಾರ್ ಅನ್ನು ಒಪ್ಪಿಕೊಳ್ಳಲಾಗುತ್ತಿದೆ. 50 ಸಾವಿರ ರುಪಾಯಿ ಮೇಲ್ಪಟ್ಟ ಹಣ ವರ್ಗಾವಣೆಗೆ ಪಾನ್ ಬದಲಿಗೆ ಆಧಾರ್ ಅನ್ನು ಬಳಸಬಹುದು ಎಂದು ಕಂದಾಯ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಅವರು ಹೇಳಿದ್ದಾರೆ.
ಇತ್ತೀಚಿಗಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಾಣ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಐಟಿ ರಿಟರ್ನ್ಸ್ ಗಾಗಿ ತೆರಿಗೆದಾರರು ಪಾಕ್ ಕಾರ್ಡ್ ಬದಲು ಆಧಾರ್ ಕಾರ್ಡ್ ಬಳಸುವಂತೆ ಮಾಡಲಾಗುವುದು ಎಂದು ಹೇಳಿದ್ದರು. 
ದೇಶದಲ್ಲಿ ಸದ್ಯ 22 ಕೋಟಿ ಪಾನ್ ಕಾರ್ಡ್ ಗಳು ಇದ್ದು, ಅದಕ್ಕೆ ಆಧಾರ್ ಲಿಂಕ್ ಮಾಡಲಾಗಿದೆ. ಆದರೆ 120 ಕೋಟಿ ಭಾರತೀಯರು ಆಧಾರ್ ಹೊಂದಿದ್ದಾರೆ. ಹೀಗಾಗಿ ಪಾನ್ ಕಾರ್ಡ್ ಪಡೆಯಲು ಮತ್ತು ಹಣ ವರ್ಗಾಣೆಗೆ ಆಧಾರ್ ಇದ್ದರೆ ಸಾಕು ಎಂದು ಪಾಂಡೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT