ಸಾಂದರ್ಭಿಕ ಚಿತ್ರ 
ದೇಶ

50 ಸಾವಿರ ರು. ಮೇಲ್ಪಟ್ಟ ಹಣ ವರ್ಗಾವಣೆಗೆ ಆಧಾರ್ ಬಳಸಬಹುದು: ಕಂದಾಯ ಕಾರ್ಯದರ್ಶಿ

50 ಸಾವಿರ ರುಪಾಯಿಗಿಂತ ಹೆಚ್ಚು ಹಣ ವರ್ಗಾವಣೆಗೆ ಭಾರತದ ರಾಷ್ಟ್ರೀಯ ಬಯೋಮೆಟ್ರಿಕ್ ಐಡಿ ಕಾರ್ಡ್ ಆಧಾರನ್ನು ಬಳಸಬಹುದು ಮತ್ತು ಇತರೆ...

ನವದೆಹಲಿ: 50 ಸಾವಿರ ರುಪಾಯಿಗಿಂತ ಹೆಚ್ಚು ಹಣ ವರ್ಗಾವಣೆಗೆ ಭಾರತದ ರಾಷ್ಟ್ರೀಯ ಬಯೋಮೆಟ್ರಿಕ್ ಐಡಿ ಕಾರ್ಡ್ ಆಧಾರನ್ನು ಬಳಸಬಹುದು ಮತ್ತು ಇತರೆ ಉದ್ದೇಶಗಳಿಗೆ ಎಂದಿನಂತೆ ಪಾನ್ ಕಾರ್ಡ್ ಕಡ್ಡಾಯ ಎಂದು ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್ ಮತ್ತು ಇತರೆ ಸಂಸ್ಥೆಗಳಲ್ಲಿ ಆಧಾರ್ ಅನ್ನು ಒಪ್ಪಿಕೊಳ್ಳಲಾಗುತ್ತಿದೆ. 50 ಸಾವಿರ ರುಪಾಯಿ ಮೇಲ್ಪಟ್ಟ ಹಣ ವರ್ಗಾವಣೆಗೆ ಪಾನ್ ಬದಲಿಗೆ ಆಧಾರ್ ಅನ್ನು ಬಳಸಬಹುದು ಎಂದು ಕಂದಾಯ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಅವರು ಹೇಳಿದ್ದಾರೆ.
ಇತ್ತೀಚಿಗಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಾಣ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಐಟಿ ರಿಟರ್ನ್ಸ್ ಗಾಗಿ ತೆರಿಗೆದಾರರು ಪಾಕ್ ಕಾರ್ಡ್ ಬದಲು ಆಧಾರ್ ಕಾರ್ಡ್ ಬಳಸುವಂತೆ ಮಾಡಲಾಗುವುದು ಎಂದು ಹೇಳಿದ್ದರು. 
ದೇಶದಲ್ಲಿ ಸದ್ಯ 22 ಕೋಟಿ ಪಾನ್ ಕಾರ್ಡ್ ಗಳು ಇದ್ದು, ಅದಕ್ಕೆ ಆಧಾರ್ ಲಿಂಕ್ ಮಾಡಲಾಗಿದೆ. ಆದರೆ 120 ಕೋಟಿ ಭಾರತೀಯರು ಆಧಾರ್ ಹೊಂದಿದ್ದಾರೆ. ಹೀಗಾಗಿ ಪಾನ್ ಕಾರ್ಡ್ ಪಡೆಯಲು ಮತ್ತು ಹಣ ವರ್ಗಾಣೆಗೆ ಆಧಾರ್ ಇದ್ದರೆ ಸಾಕು ಎಂದು ಪಾಂಡೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

'ನೀ ನನಗೆ ಇಷ್ಟ ಇಲ್ಲ': ಮದುವೆಯಾದ ಮೊದಲ ದಿನವೇ ಪತ್ನಿಗೆ ಶಾಕ್​​ ಕೊಟ್ಟ ಪತಿ; ಪ್ರಭಾವಿ ಸಚಿವರ PAಯಿಂದಲೇ ದೋಖಾ?

ಜಾರ್ಖಂಡ್‌ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾರ್ ಕ್ಯಾಷಿಯರ್‌ಗೆ ಬೆದರಿಕೆ; ಇಬ್ಬರು ಉದ್ಯಮಿಗಳು, ಪ್ರಭಾವಿ ಮಹಿಳೆ ಮೇಲೆ ಕಣ್ಣಿಟ್ಟ ಪೊಲೀಸರು!

ಸ್ವಾತಂತ್ರ್ಯ ದಿನ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿಯಲ್ಲಿ ಹೈ ಅಲರ್ಟ್, 19 ಮೋಸ್ಟ್ ವಾಂಟೆಡ್ ಉಗ್ರರ ಪೋಸ್ಟರ್ ರಿಲೀಸ್!