ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ 
ದೇಶ

ಜೈ ಶ್ರೀರಾಮ್ ಘೋಷಣೆ ಜನರ ಮೇಲೆ ಹಲ್ಲೆ ಮಾಡಲು ಬಳಕೆ: ಅಮರ್ಥ್ಯ ಸೇನ್

ಮಾ ದುರ್ಗಾದಂತೆ ಜೈ ಶ್ರೀರಾಮ್ ಘೋಷಣೆ ಬಂಗಾಳದ ಸಂಸ್ಕೃತಿ ಜೊತೆ ಬೆರೆತುಕೊಂಡಿಲ್ಲ, ಅದನ್ನು ...

ಕೋಲ್ಕತ್ತಾ: ಮಾ ದುರ್ಗಾದಂತೆ ಜೈ ಶ್ರೀರಾಮ್ ಘೋಷಣೆ ಬಂಗಾಳದ ಸಂಸ್ಕೃತಿ ಜೊತೆ ಬೆರೆತುಕೊಂಡಿಲ್ಲ, ಅದನ್ನು ಜನರ ಮೇಲೆ ಹಲ್ಲೆ ಮಾಡಲು ನೆಪವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ  ಅಮರ್ತ್ಯ ಸೇನ್ ಆರೋಪಿಸಿದ್ದಾರೆ.
ಬಂಗಾಳಿ ಜನರ ಜೀವನದಲ್ಲಿ ಮಾ ದುರ್ಗಾ ಎಂದರೆ ಸರ್ವವ್ಯಾಪಿಯಾಗಿದೆ ಎಂದು ಜಾದವ್ ಪುರ ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಆದರೆ ಜೈ ಶ್ರೀರಾಮ್ ಘೋಷಣೆ ಬಂಗಾಳಿ ಸಂಸ್ಕೃತಿ ಜೊತೆ ಬೆರೆತುಕೊಂಡಿಲ್ಲ, ಇಂದಿನ ದಿನಗಳಲ್ಲಿ ರಾಮನವಮಿ ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಅದನ್ನು ನಾನು ಈ ಹಿಂದೆ ಕೇಳಿರಲಿಲ್ಲ. ನಿನ್ನ ಇಷ್ಟದ ದೇವರು ಯಾರು ಎಂದು ನನ್ನ 4 ವರ್ಷದ ಮೊಮ್ಮಗಳಲ್ಲಿ ಕೇಳಿದೆ, ಅದಕ್ಕವಳು ಮಾ ದುರ್ಗ ಎಂದಳು, ಮಾ ದುರ್ಗ ನಮ್ಮ ಜೀವನದಲ್ಲಿ ಸರ್ವವ್ಯಾಪಿಯಾಗಿದೆ ಎಂದರು.
ಇಂದು ಜೈ ಶ್ರೀರಾಮ್ ಘೋಷಣೆಯನ್ನು ಜನರ ಮೇಲೆ ಹೊಡೆಯಲು, ಹಲ್ಲೆ ಮಾಡಲು ಬಳಸಲಾಗುತ್ತಿದೆ ಎಂದು ಖ್ಯಾತ ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಹೇಳಿದ್ದಾರೆ.
ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಮಾಡಿ, ಇಲ್ಲದಿದ್ದರೆ ಯುವಕರ ಮೇಲೆ ಹಲ್ಲೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಘಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಅಮರ್ಥ್ಯ ಸೇನ್ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT