ಸಾಂದರ್ಭಿಕ ಚಿತ್ರ 
ದೇಶ

ಅಧಿಕಾರಿ ಮೇಲೆ ಹಲ್ಲೆ: ಮಹಾ ಎನ್ ಸಿಪಿ ಶಾಸಕನ ವಿರುದ್ಧ ಕೇಸ್ ದಾಖಲು

ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರಿಬ್ಬರು ಜೈಲಿಗೆ ಹೋಗಿ ಬಂದ ಬೆನ್ನಲ್ಲೇ ನಗರ ಪಾಲಿಕೆ ಅಧಿಕಾರಿ...

ಔರಂಗಬಾದ್: ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರಿಬ್ಬರು ಜೈಲಿಗೆ ಹೋಗಿ ಬಂದ ಬೆನ್ನಲ್ಲೇ ನಗರ ಪಾಲಿಕೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಎನ್ ಸಿಪಿ ಶಾಸಕರೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಜಿಂತೂರ್ ನಗರ ಪಾಲಿಕೆಯ ತೆರಿಗೆ ಇಲಾಖೆ ಅಧಿಕಾರಿ ಡಿವಿ ತಲೆಕಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜಿಂತೂರ್ ಎನ್ ಸಿಪಿ ಶಾಸಕ ವಿಜಯ್ ಭಂಬಲೆ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶಾಲೆಯ ಆಸ್ತಿ ತೆರಿಗೆ ಮತ್ತು ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮನೆಗೆ ಕರೆಸಿದ್ದ ಶಾಸಕರು, ಶಾಲೆಯ ಆಸ್ತಿ ತೆರಿಗೆ ಮತ್ತು ನೀರಿನ ಬಿಲ್ ಮನ್ನಾ ಮಾಡುವಂತೆ ಒತ್ತಡ ಹೇರಿದರು. ಇದಕ್ಕೆ ಒಪ್ಪದಿದ್ದಾಗ ನನ್ನನ್ನು ನಿಂದಿಸಿ, ಹಲ್ಲೆ ನಡೆಸಿದರು ಎಂದು ಅಧಿಕಾರಿ ತಲೆಕರ್ ಆರೋಪಿಸಿದ್ದಾರೆ.
ತಲೆಕರ್ ನೀಡಿದ ದೂರಿನ ಆಧಾರದ ಮೇಲೆ ನಾವು ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ಮಧ್ಯ ಪ್ರದೇಶದಲ್ಲಿ ಬಿಜೆಪಿ ಶಾಸಕ ಆಕಾಸ್ ವಿಜಯ್ ವರ್ಗಿಯಾ ಅವರು ಅಧಿಕಾರಿ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದರು. ಅಲ್ಲದೆ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ ಅವರು ಇಂಜಿನಿಯರ್ ಮೇಲೆ ಕೇಸರು ಸುರಿದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT