ಓವೈಸಿ 
ದೇಶ

ಗುಂಪು ಹಲ್ಲೆ ವಿರುದ್ಧ ಸೂಕ್ತ ಕಾನೂನು ರೂಪಿಸುವಂತೆ ಓವೈಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯ

ಗುಂಪು ಹಲ್ಲೆ ವಿರುದ್ಧ ಸೂಕ್ತ ಕಾನೂನು ರೂಪಿಸುವಂತೆ ಸುಪ್ರೀಂಕೋರ್ಟ್ ಸಲಹೆ ನೀಡಿದ್ದರೂ ಶಾಸನ ರಚನೆಯಾಗದಿರುವುದು ಅಚ್ಚರಿ ತಂದಿದೆ. ಇಂತಹ ಹೀನ ಕೃತ್ಯಗಳ ವಿರುದ್ಧ ಸೂಕ್ತ ಕಾನೂನು ರೂಪಿಸಬೇಕೆಂದು ಎಐಎಂಐಎ ಅಧ್ಯಕ್ಷ ಅಸುದುದ್ದೀನ್ ಓವೈಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನವದೆಹಲಿ:  ಗುಂಪು ಹಲ್ಲೆ ವಿರುದ್ಧ ಸೂಕ್ತ ಕಾನೂನು ರೂಪಿಸುವಂತೆ ಸುಪ್ರೀಂಕೋರ್ಟ್ ಸಲಹೆ ನೀಡಿದ್ದರೂ ಶಾಸನ ರಚನೆಯಾಗದಿರುವುದು ಅಚ್ಚರಿ ತಂದಿದೆ. ಇಂತಹ ಹೀನ ಕೃತ್ಯಗಳ ವಿರುದ್ಧ ಸೂಕ್ತ ಕಾನೂನು ರೂಪಿಸಬೇಕೆಂದು  ಎಐಎಂಐಎ ಅಧ್ಯಕ್ಷ ಅಸುದುದ್ದೀನ್ ಓವೈಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆರ್ ಎಸ್ ಎಸ್ ದ್ವೇಷವನ್ನು ಹರಡುತ್ತಿದ್ದು, ಮುಸ್ಲಿಂರ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದೆ.ಇದರಿಂದಾಗಿ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.
ಆರ್ ಎಸ್ ಎಸ್ ಸಾಹಿತ್ಯವನ್ನು ಓದಿದ್ದೀರಾ,  ಮಾನವತವಾದ ಬಗ್ಗೆ ದೀನ್ ದಯಾಳ್ ಉಪಾಧ್ಯಾಯ ಏನು ಬರೆದಿದ್ದಾರೆ, ಮುಸ್ಲಿಂರ ಬಗ್ಗೆ ಏನು ಬರೆದಿದ್ದಾರೆ ಎಂಬುದನ್ನು ಓದಿ ಎಂದು ಹೇಳಿದ್ದಾರೆ.
ಜಾರ್ಖಂಡ್ ನಲ್ಲಿ ಇತ್ತೀಚಿಗೆ ನಡೆದ ತಬ್ರೇಜ್ ಅನ್ಸಾರಿ ಹತ್ಯೆ ಕುರಿತಂತೆ ಮಾತನಾಡಿದ ಓವೈಸಿ, ಶ್ರೀರಾಮ, ಜೈ ಹನುಮನ್ ಎಂದು ಕೂಗುವಂತೆ ಗುಂಪೊಂದು ಒತ್ತಾಯಿಸಿರುವ ವಿಡಿಯೋ ಇದೆ. ಹಾಗಾದರೆ ಪ್ರಧಾನಿ ನರೇಂದ್ರ ಮೋದಿ ಆ ಯುವಕನನ್ನು ಹತ್ಯೆ ಮಾಡಿದವರನ್ನು ಉಗ್ರರು ಎಂದು ಕರೆಯುತ್ತಾರೆಯೇ, ಏಕೆ ಕಾನೂನು ರೂಪಿಸುತ್ತಿಲ್ಲ, ಸುಪ್ರೀಂಕೋರ್ಟ್ ಕಾನೂನು ಜಾರಿಗೆ ತನ್ನಿ ಎಂದು ಹೇಳಿದ್ದರೂ ಏಕೆ ನಿರ್ಲಕ್ಷ್ಯ ವಹಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಶ್ರೀರಾಮ, ಜೈ ಹನುಮಾನ್ ಎಂದು ಘೋಷಣೆ ಕೂಗುವಂತೆ  ಹಲ್ಲೆಕೋರರು  ಒತ್ತಾಯಿಸಿದ್ದರೂ ಮುಸ್ಲಿಂರು ಹಾಗೆ ಮಾಡಬೇಡಿ ಎಂದು ಸಲಹೆ ನೀಡಿದರು. ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧವಾಗಿದ್ದು, ಕಾನೂನು ರಚನೆಗಾಗಿ ಹೋರಾಡಬೇಕಾಗದ ಅಗತ್ಯವಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT