ಕ್ಯಾಪ್ಟನ್ ಅಮರೀಂದರ್ ಸಿಂಗ್, ರಾಹುಲ್ ಗಾಂಧಿ 
ದೇಶ

ರಾಹುಲ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಯುವ ನಾಯಕರ ಅಗತ್ಯವಿದೆ- ಅಮರೀಂದರ್ ಸಿಂಗ್

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದು ದುರದೃಷ್ಟಕರ ಸಂಗತಿಯಾಗಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಬಿಸಿ ರಕ್ತದ ಯುವಕರನ್ನು ನೇಮಕ ಮಾಡಬೇಕೆಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಪಂಜಾಬ್ : ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದು ದುರದೃಷ್ಟಕರ ಸಂಗತಿಯಾಗಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಬಿಸಿ ರಕ್ತದ ಯುವಕರನ್ನು ನೇಮಕ ಮಾಡಬೇಕೆಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರಿಂದ ತೆರವಾಗುವ ಸ್ಥಾನಕ್ಕೆ ವರ್ಚಸ್ಸು ಹೊಂದಿರುವ ಹಾಗೂ ಸ್ಥಳೀಯ ಮಟ್ಟದಲ್ಲೂ ಗುರುತಿಸುವಂತಹ ದೇಶಾದ್ಯಂತ ಜನರಿಗೆ ಸ್ಪಂದಿಸುವಂತಹ ಉತ್ಸಾಹಿ ಯುವ ನಾಯಕರನ್ನು ನೇಮಿಸಬೇಕಾಗಿದೆ ಎಂದು ಅಮರೀಂದರ್ ಸಿಂಗ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಬಳಿ ಮನವಿ ಮಾಡಿಕೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅಥವಾ ಸುಶೀಲ್ ಕುಮಾರ್ ಶಿಂಧೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
77 ವರ್ಷದ ಶಿಂಧೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದು,2002ರಲ್ಲಿ ಪಕ್ಷದ ಉಪಾಧ್ಯಕ್ಷರಾಗಿ ನಾಮನಿರ್ದೇಶನ ಗೊಂಡಿದ್ದರು. 76 ವರ್ಷದ ಮಲ್ಲಿಕಾರ್ಜುನ ಖರ್ಗೆ, ದಶಕಗಳಿಂದಲೂ ಗಾಂಧಿ ಕುಟುಂಬದ ನಿಷ್ಠರಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಕೂಡಾ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT