ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ 
ದೇಶ

ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗ ಸಂಪೂರ್ಣ ವಿದ್ಯುದೀಕರಣ: ರೈಲ್ವೆ ಸಚಿವ ಪಿಯೂಷ್‌ ಗೋಯಲ್‌

ಗೋವಾ ಮಾರ್ಗವಾಗಿ ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು 11,000 ಕೋಟಿ ರೂ ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ

ಪಣಜಿ: ಗೋವಾ ಮಾರ್ಗವಾಗಿ ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು 11,000 ಕೋಟಿ ರೂ ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ
ಬಿಜೆಪಿ ಸದಸ್ಯತ್ವ ಅಭಿಯಾನ ಅಂಗವಾಗಿ ನಿನ್ನೆ ಇಲ್ಲಿ ಆಯೋಜಿಸಿದ್ದ ಸಮಾರಂಭದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂಬೈ-ಮಂಗಳೂರು ಮಾರ್ಗವನ್ನು ಈ ಯೋಜನೆಯಡಿ ಸಂಪೂರ್ಣ ವಿದ್ಯುದೀಕರಣಗೊಳಿಸಲಾಗುವುದು, ಇದರಿಂದ ರಮ್ಯ ಪ್ರಕೃತಿ ಸೊಬಗು ಇರುವ ಕೊಂಕಣ ರೈಲ್ವೆ ಮಾರ್ಗ ಮಾಲಿನ್ಯ ಮುಕ್ತಗೊಂಡು ವೇಗವೂ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ
ವಿಶ್ವದಲ್ಲೇ ಅತ್ಯುತ್ತಮ ಸೇವೆ ಮತ್ತು ದರ್ಜೆಯನ್ನಾಗಿಸಲು ರೈಲ್ವೆ ವಲಯದಲ್ಲಿ 2030ರ ವೇಳೆಗೆ 50 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಸರ್ಕಾರ ಉದ್ದೇಶಿಸಿದೆ. ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೊಳ್ಳಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪ್ರವಾಸೋದ್ಯಮ ತಾಣವಾದ ಗೋವಾದಲ್ಲಿ ರೈಲು ಸಂಪರ್ಕ ವೃದ್ದಿಸಲು ಒತ್ತು ನೀಡಲಾಗಿದೆ. ಸಾಂಪ್ರದಾಯಿಕ ಹಳೆ ಬೋಗಿಗಳನ್ನು ಅತ್ಯಾಧುನಿಕ ಬೋಗಿಗಳೊಂದಿಗೆ ಬದಲಾಯಿಸುವ ಕಾರ್ಯ ವೇಗದಿಂದ ಸಾಗಿದೆ. ಮೇಕ್‌ ಇನ್‌ ಇಂಡಿಯಾ ಕಾರ್ಯಕ್ರಮದಡಿ ದೇಶೀಯವಾಗಿಯೇ ವಿಶ್ವದರ್ಜೆಯ ಬೋಗಿಗಳ ಉತ್ಪಾದನೆಯಾಗುತ್ತಿದೆ ಎಂದು ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT