ಕುಲ್ಜಿತ್ ನಗರ್ 
ದೇಶ

ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಕುಲ್ಜಿತ್ ನಗರ್ ರಾಜೀನಾಮೆ

ಪಂಜಾಬ್ ಕಾಂಗ್ರೆಸ್ ಶಾಸಕ ಕುಲ್ಜಿತ್ ನಗರ್ ಅವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಶಾಸಕ ಕುಲ್ಜಿತ್ ನಗರ್ ಅವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿರ್ಧಾರದಿಂದ ನನಗೆ ವೈಯಕ್ತಿವಾಗಿ ನೋವಾಗಿದೆ. ಹೀಗಾಗಿ ನಾನು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಗರ್ ತಿಳಿಸಿದ್ದಾರೆ.
ನಿಮ್ಮ ರಾಜೀನಾಮೆ ನಿರ್ಧಾರದಿಂದ ನನಗೆ ನೋವಾಗಿದೆ. ಲೋಕಸಭೆ ಚುನಾವಣೆಯ ಸೋಲಿಗೆ ನೀವು ಒಬ್ಬರೆ ಹೊಣೆಯಲ್ಲ. ಅದು ಸಾಮೂಹಿಕ ಜವಾಬ್ದಾರಿ. ಹೀಗಾಗಿ ನಾನೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ನಗರ್ ಅವರು ರಾಹುಲ್ ಗಾಂಧಿಗೆ ಕಳುಹಿಸಿದ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಅವರು ಜುಲೈ 3ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಇದುವರೆಗೂ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT