ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್: ಗರ್ಭಿಣಿ ಪತ್ನಿ ಕರೆದುಕೊಂಡು ಬರಲು ಹೋಗಿದ್ದ ದಲಿತ ವ್ಯಕ್ತಿಯ ಹತ್ಯೆ

ತನ್ನ ಮೇಲ್ವರ್ಗದ ಗರ್ಭಿಣಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬರಲು ಮಾವನ ಮನೆಗೆ ಹೋಗಿದ್ದ 25 ವರ್ಷದ ದಲಿತ ವ್ಯಕ್ತಿಯನ್ನು ಪತ್ನಿ ಸಂಬಂಧಿಕರು...

ಅಹಮದಾಬಾದ್: ತನ್ನ ಮೇಲ್ವರ್ಗದ ಗರ್ಭಿಣಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬರಲು ಮಾವನ ಮನೆಗೆ ಹೋಗಿದ್ದ 25 ವರ್ಷದ ದಲಿತ ವ್ಯಕ್ತಿಯನ್ನು ಪತ್ನಿ ಸಂಬಂಧಿಕರು ಹತ್ಯೆ ಮಾಡಿರುವ ಘಟನೆ ಗುಜರಾತ್ ನ ಅಹಮದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಹರೇಶ್ ಸೋಲಂಕಿ ಎಂಬುವವರು ತನ್ನ ಎರಡು ತಿಂಗಳ ಗರ್ಭಿಣಿ ಪತ್ನಿ ಉರ್ಮಿಳಾ ಅವರನ್ನು ಕರೆದುಕೊಂಡು ಬರಲು ಅಹಮದಾಬಾದ್ ಜಿಲ್ಲೆಯ ವರ್ಮೊರ್ ಗ್ರಾಮಕ್ಕೆ ತೆರಳಿದ್ದಾಗ ಅವರನ್ನು ಕೊಲೆ ಮಾಡಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಉರ್ಮಿಳಾ ಅವರು ಮೇಲ್ವರ್ಗದ ದರ್ಬಾರ್ ಸಮುದಾಯಕ್ಕೆ ಸೇರಿದ್ದು, ಕೆಲವು ತಿಂಗಳ ಹಿಂದಷ್ಟೇ ಹರೇಶ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಮದುವೆ ಬಳಿಕ ಕಚ್ ಜಿಲ್ಲೆಯ ಗಾಂಧಿಧಾಮದಲ್ಲಿ ದಂಪತಿಗಳು ವಾಸಿಸುತ್ತಿದ್ದರು ಉಪ ಪೊಲೀಸ್ ಅಧೀಕ್ಷಕ ಪಿಡಿ ಮನ್ವಾರ್ ಅವರು ಹೇಳಿದ್ದಾರೆ.
ಕೆಲವು ವಾರಗಳಲ್ಲೇ ಪತ್ನಿಯನ್ನು ಕಳುಹಿಸುವುದಾಗಿ ಹೇಳಿದ್ದರು. ಆದರೆ ಎರಡು ತಿಂಗಳಾದರೂ ಪತ್ನಿ ಬರದ ಹಿನ್ನೆಲೆಯಲ್ಲಿ ಹರೇಶ್ ಅವರು ತಾವೇ ಪತ್ನಿ ಕರೆದುಕೊಂಡು ಬರಲು ಹೋಗಿದ್ದರು. ಈ ವೇಳೆ ಪತ್ನಿ ಕಳುಹಿಸಲು ನಿರಾಕರಿಸಿದ ಉರ್ಮಿಳಾ ಸಂಬಂಧಿಕರು ಹರೇಶ್ ಮೇಲೆ ಹರಿತವಾದ ವಸ್ತುಗಳಿಂದ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಹರೇಶ್ ಸೋಲಂಕಿ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಸಂಬಂಧ ಹರೇಶ್ ಮಾವ ಸೇರಿದಂತೆ ಪತ್ನಿಯ 8 ಸಂಬಂಧಿಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮನ್ವಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT